ಉಡುಪಿ: ಶೀತ, ಕೆಮ್ಮು, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ಗಳನ್ನು ಮಾಡಿಸಬೇಕು, ತಪ್ಪಿದ್ದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ ನೊಂದಣಿಯನ್ನು ರದ್ದು ಮಾಡಲಾಗು ವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾಪ್ರಾಧಿಕಾರದ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇತ್ತೀಚಿನ ದಿನ ಗಳಲ್ಲಿ ಜನರು ಕೋವಿಡ್ ಸೋಂಕಿನ ಬಗ್ಗೆ ನಿನಿರ್ಲಕ್ಷ ವಹಿಸುತ್ತಿದ್ದಾರೆ. ಇದರಿಂದಾಗಿ ಎರಡನೇ ಅಲೆ ಪ್ರಾರಂಭ ವಾಗುವ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು, ಶೀತ, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು ಎಂದರು. ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿ, ತಮ್ಮ ವೃತ್ತಿಯನ್ನು ಕೈಗೊಳ್ಳಬೇಕು. ನೊಂದಣಿ ಮಾಡದೇ ಚಿಕಿತ್ಸೆ ನೀಡಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ವಂಶ ಪಾರಂಪರೆಯಾಗಿ ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತಿದ್ದೇವೆ ಎಂಬ ಹೆಸರಿನಲ್ಲಿ ಔಷಧೋಪಚಾರಗಳನ್ನು ನೀಡುವಾಗ ಅಲೋಪಥಿ ಮೆಡಿಸನ್ ನೀಡುವುದು ಅಪರಾಧ. ಇಂತಹ ವೃತ್ತಿಗಳು ಕಂಡು ಬಂದಲ್ಲಿ ಕಾನೂನು ಅಡಿಯಲ್ಲಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…