ಉಡುಪಿ,: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ, ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಪ್ರದೇಶದಲ್ಲಿ ಅಂಡರ್ ಪಾಸಿನ ಅವಶ್ಯಕತೆಯಿದೆ ಎಂದು ಕ್ಷೇತ್ರದ ಜನತೆ ಹಲವಾರು ವರುಷಗಳಿಂದ ಬೇಡಿಕೆಯಿಟ್ಟಿದ್ದರು.
ಕ್ಷೇತ್ರದ ಜನರ ಅಪೇಕ್ಷೆಯಂತೆ, ಕೇಂದ್ರ ಸರಕಾರ ಕಟಪಾಡಿಯಲ್ಲಿ ಅಂಡರ್ ಪಾಸಿನ ಬದಲು, ‘ಓವರ್ ಪಾಸ್’ ನಿರ್ಮಿಸಲು ತಾತ್ವಿಕ ಅನುಮೋದನೆಯನ್ನು ನೀಡಿದ್ದು, ಈ ಯೋಜನೆಯು ಕಾಪು ವಿಧಾನ ಸಭಾ ಕ್ಷೇತ್ರದ ಕಟಪಾಡಿ, ಬಂಟಕಲ್, ಶಿರ್ವ, ಮಟ್ಟು, ಬೆಳ್ಮಣ್ ಪ್ರದೇಶದ ನಿವಾಸಿಗಳಿಗೆ ಸಹಕಾರಿಯಾಗಲಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಹಲವಾರು ಬಾರಿ ಕೇಂದ್ರ ಭೂ ಸಾರಿಗೆ ಸಚಿವರನ್ನು ಭೇಟಿಯಾಗಿ ಕಟಪಾಡಿ ನಗರ ಪ್ರದೇಶವಾಗಿದ್ದು, ಹೆಚ್ಚಿನ ಜನ ಸಂಚಾರವಿರುವ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ‘ಅಂಡರ್ ಪಾಸಿನ/ಓವರ್ ಪಾಸ್’ ಅನಿವಾರ್ಯತೆಯಿದೆ ಎಂದು ಮನದಟ್ಟು ಮಾಡಲಾಗಿದ್ದು, ಇದೀಗ ಕಟಪಾಡಿಯಲ್ಲಿ ಒವರ್ ಪಾಸ್ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಅನುಮೋದನೆ ನೀಡಿದೆ.
ವಿಸ್ತೃತ ಯೋಜನಾ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರು ಮಾಡುದ್ದು, ಮುಂದಿನ ತಿಂಗಳಲ್ಲಿ ಯೋಜನೆಯ ಪೂರ್ಣ ವಿವರಗಳು ಲಭ್ಯವಾಗಳಿವೆ.
ಇನ್ನು ಜನಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಕಟಪಾಡಿಯಲ್ಲಿ ಒಟ್ಟು 22.72 ಕೋಟಿಗಳ ವೆಚ್ಚದಲ್ಲಿ ಓವರ್ ಪಾಸ್ ಅನ್ನು ನಿರ್ಮಿಸಲು ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ, ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರಿಗೆ ಸಂಸದೆ ಶೋಭಾ ಕರಂದ್ಲಾಜೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…