ಉಡುಪಿ,: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ, ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಪ್ರದೇಶದಲ್ಲಿ ಅಂಡರ್ ಪಾಸಿನ ಅವಶ್ಯಕತೆಯಿದೆ ಎಂದು ಕ್ಷೇತ್ರದ ಜನತೆ ಹಲವಾರು ವರುಷಗಳಿಂದ ಬೇಡಿಕೆಯಿಟ್ಟಿದ್ದರು.
ಕ್ಷೇತ್ರದ ಜನರ ಅಪೇಕ್ಷೆಯಂತೆ, ಕೇಂದ್ರ ಸರಕಾರ ಕಟಪಾಡಿಯಲ್ಲಿ ಅಂಡರ್ ಪಾಸಿನ ಬದಲು, ‘ಓವರ್ ಪಾಸ್’ ನಿರ್ಮಿಸಲು ತಾತ್ವಿಕ ಅನುಮೋದನೆಯನ್ನು ನೀಡಿದ್ದು, ಈ ಯೋಜನೆಯು ಕಾಪು ವಿಧಾನ ಸಭಾ ಕ್ಷೇತ್ರದ ಕಟಪಾಡಿ, ಬಂಟಕಲ್, ಶಿರ್ವ, ಮಟ್ಟು, ಬೆಳ್ಮಣ್ ಪ್ರದೇಶದ ನಿವಾಸಿಗಳಿಗೆ ಸಹಕಾರಿಯಾಗಲಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಹಲವಾರು ಬಾರಿ ಕೇಂದ್ರ ಭೂ ಸಾರಿಗೆ ಸಚಿವರನ್ನು ಭೇಟಿಯಾಗಿ ಕಟಪಾಡಿ ನಗರ ಪ್ರದೇಶವಾಗಿದ್ದು, ಹೆಚ್ಚಿನ ಜನ ಸಂಚಾರವಿರುವ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ‘ಅಂಡರ್ ಪಾಸಿನ/ಓವರ್ ಪಾಸ್’ ಅನಿವಾರ್ಯತೆಯಿದೆ ಎಂದು ಮನದಟ್ಟು ಮಾಡಲಾಗಿದ್ದು, ಇದೀಗ ಕಟಪಾಡಿಯಲ್ಲಿ ಒವರ್ ಪಾಸ್ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಅನುಮೋದನೆ ನೀಡಿದೆ.
ವಿಸ್ತೃತ ಯೋಜನಾ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರು ಮಾಡುದ್ದು, ಮುಂದಿನ ತಿಂಗಳಲ್ಲಿ ಯೋಜನೆಯ ಪೂರ್ಣ ವಿವರಗಳು ಲಭ್ಯವಾಗಳಿವೆ.
ಇನ್ನು ಜನಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಕಟಪಾಡಿಯಲ್ಲಿ ಒಟ್ಟು 22.72 ಕೋಟಿಗಳ ವೆಚ್ಚದಲ್ಲಿ ಓವರ್ ಪಾಸ್ ಅನ್ನು ನಿರ್ಮಿಸಲು ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ, ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರಿಗೆ ಸಂಸದೆ ಶೋಭಾ ಕರಂದ್ಲಾಜೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…