ಉಡುಪಿ, : ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿರುವ ಈಟ್ ರಿಪೀಟ್ ಎಂಬ ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇರಿಸಿದ್ದು ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕುಂದಾಪುರ ಕವ್ರಾಡಿ ಮಸೀದಿ ಬಳಿಯ ನಿವಾಸಿ ಅಬ್ದುಲ್ ಅಜೀಜ್ (36) ಹಾಗೂ ಕವ್ರಾಡಿ ಜನತಾ ಕಾಲೋನಿಯ ಸಬೀಬ್(25) ಎನ್ನಲಾಗಿದೆ.
ಆರೋಪಿಗಳಾದ ಮಹ್ಮದ್ ತನ್ವೀರ್ ಹಾಗೂ ಸಬೀಬ್ ಅಂಗಡಿಯಲ್ಲಿ 1 ಕೆ.ಜಿ. 50 ಗ್ರಾಂ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಇರಿಸಿಕೊಂಡಿದ್ದು ಕಾರ್ಯಾಚರಣೆ ನಡೆಸಿದ ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಒಟ್ಟು ಸೊತ್ತುಗಳ ಮೌಲ್ಯ ಸುಮಾರು 25,000/- ರೂಪಾಯಿ ಎಂದು ಅಂದಾಜಿಸಲಾಗಿದೆ.
ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…