Featured

ಉಡುಪಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ – vishwanews24

ಉಡುಪಿ :  ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ

ಉಡುಪಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು ಅಂಗನವಾಡಿ ಕಾರ್ಯಕರ್ತೆ-57 ಹಾಗೂ ಅಂಗನವಾಡಿ ಸಹಾಯಕಿಯರು-136 ಗೌರವ ಸೇವೆಯ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್   https://karnemakaone.kar.nic.in/abcd/  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಸ್ಥಳಗಳ ವಿವರ: ಉಡುಪಿ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರು, ಕುಂದಾಪುರ ತಾಲೂಕಿನಲ್ಲಿ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರು, ಕಾರ್ಕಳ ತಾಲೂಕಿನಲ್ಲಿ 7ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರು ಮತ್ತು ಬ್ರಹ್ಮಾವರ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇರುತ್ತವೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

14 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

14 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

14 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

15 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

15 hours ago