Featured

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಅನುದಾನ ತುರ್ತಾಗಿ ಬಿಡುಗಡೆಗೆ ಮಾಡುವಂತೆ  ಸಿಎಂಗೆ ಯಶ್ ಪಾಲ್ ಮನವಿ – vishwanews24

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಅನುದಾನ ತುರ್ತಾಗಿ ಬಿಡುಗಡೆಗೆ ಮಾಡುವಂತೆ  ಸಿಎಂಗೆ ಯಶ್ ಪಾಲ್ ಮನವಿ

ಉಡುಪಿ: ರಾಜ್ಯ ಸರ್ಕಾರದಿಂದ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಹಲವು ಬಾಕಿ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ನೀಡಲಾಗುವ ನಿರ್ವಹಣಾ ಅನುದಾನ ಬಿಡುಗಡೆಯಾಗದೆ, ಶಾಲಾ-ಕಾಲೇಜುಗಳಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲಾಗದೆ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸೂಚನೆ ನೀಡಿರುವ ಸನ್ನಿವೇಶ ನಿರ್ಮಾಣವಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮರ್ಪಕವಾಗಿ ಗೌರವಧನ ಪಾವತಿಯಾಗದೆ ಸಂಕಷ್ಟಕ್ಕೊಳಗಾಗಿದ್ದಾರೆ.ಪ್ರಾಕೃತಿಕ ವಿಕೋಪದಿಂದ ಹಾನಿಯ ಬಗ್ಗೆ ಜಿಲ್ಲಾಡಳಿತವು ಪರಿಶೀಲನೆ ನಡೆಸಿ ಅಂದಾಜು ರೂ. 234 ಕೋಟಿ ನಷ್ಟದ ಕುರಿತು ಸರಕಾರಕ್ಕೆ ವರದಿ ಸಲ್ಲಿಸಿರುತ್ತದೆ. ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ರಸ್ತೆಗಳ, ಚರಂಡಿಗಳ, ಶಾಲೆ-ಅಂಗನವಾಡಿ ಇತ್ಯಾದಿ ಕಟ್ಟಡ ದುರಸ್ತಿಗೆ ಸರಕಾರ ತುರ್ತಾಗಿ ಅನುದಾನ ಬಿಡುಗಡೆ ಮಾಡಬೇಕಾಗಿದೆ.

ರಾಜ್ಯ ಸರಕಾರವು ಕಳೆದ 4 ತಿಂಗಳಿನಿಂದ ಹೈನುಗಾರರಿಗೆ ನೀಡಬೇಕಾದ ಲೀಟರ್ ಒಂದಕ್ಕೆ ರೂ. 5 ಪ್ರೋತ್ಸಾಹ ಧನ ಬಿಡುಗಡೆ ಮಾಡದೆ ಹೈನುಗಾರರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದು, ಸದ್ರಿ ಮೊತ್ತವನ್ನು ಏಕ ಕಂತಿನಲ್ಲಿ ಬಿಡುಗಡೆ ಮಾಡಬೇಕು ಮತ್ತು ಸರಕಾರದ ವಿವಿಧ ನಿಗಮ ಮಂಡಳಿಗಳ ಸಿಬ್ಬಂದಿಗಳಿಗೆ ಕಳೆದ 4-6 ತಿಂಗಳುಗಳಿಂದ ವೇತನ ಪಾವತಿಯಾಗದೆ ತೊಂದರೆಗೊಳಗಾಗಿದ್ದು, ತಕ್ಷಣ ನಿಗಮ ಮಂಡಳಿಗಳ ಸಿಬ್ಬಂದಿಗಳ ವೇತನ ಪಾವತಿಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

4 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

4 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

4 hours ago