Featured

ಉಡುಪಿ: ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ – vishwanews24

ಉಡುಪಿ: ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ

    ಉಡುಪಿ: ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “Application Successfully Uploaded’’’’ ಎಂಬ ಮೇಸೆಜ್ ಅವರುಗಳ ಮೊಬೈಲ್ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 156 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

   ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ 2025 ಜನವರಿ 5 ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್ಸೈಟ್ ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಸರ್ಕಾರವು ಆದೇಶಿಸಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಒಂದನೇ ಹಂತಆನ್ಲೈನ್ ತಂತ್ರಾAಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡುವುದು, ಮೂರನೇ ಹಂತತಮ್ಮ ದಾಖಲಾತಿಗಳನ್ನು ಅಪ್ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು.

  ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಸಂಬAಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

5 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

15 minutes ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

35 minutes ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

1 hour ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

2 hours ago

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

3 hours ago