Featured

ಉಡುಪಿ: ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ – vishwanews24

ಉಡುಪಿ: ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ

    ಉಡುಪಿ: ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “Application Successfully Uploaded’’’’ ಎಂಬ ಮೇಸೆಜ್ ಅವರುಗಳ ಮೊಬೈಲ್ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 156 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

   ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ 2025 ಜನವರಿ 5 ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್ಸೈಟ್ ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಸರ್ಕಾರವು ಆದೇಶಿಸಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಒಂದನೇ ಹಂತಆನ್ಲೈನ್ ತಂತ್ರಾAಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡುವುದು, ಮೂರನೇ ಹಂತತಮ್ಮ ದಾಖಲಾತಿಗಳನ್ನು ಅಪ್ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು.

  ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಸಂಬAಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago