Featured

ಉಡುಪಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ಯಾಸ್ ದರ ಏರಿಕೆಯಾಗಿದೆ ಆದ್ದರಿಂದ ದರ ಏರಿಕೆ ಅನಿವಾರ್ಯ : ಅಣ್ಣಾ ಮಲೈ  – vishwanews24

ಉಡುಪಿ: ಬಿಜೆಪಿಯ ಜನಾಕ್ರೋಶ ಯಾತ್ರೆ, ಎಲ್ಲರೂ ಜನರ ಜೊತೆಯಾಗಬೇಕು ..

ಒಂದು ದಿನ ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ: ಅಣ್ಣಾ ಮಲೈ

ಉಡುಪಿ: ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಬಳಿಕ ಗ್ಯಾಸ್ ಬಳಕೆ ಜಾಸ್ತಿ ಆಗುತ್ತಿದೆ ಅಲ್ಲದೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ಯಾಸ್ ದರ ಏರಿಕೆಯಾಗಿದೆ ಆದ್ದರಿಂದ ದರ ಏರಿಕೆ ಅನಿವಾರ್ಯ ಎಂದು ಬಿಜೆಪಿ ಮುಖಂಡ ಕೆ ಅಣ್ಣಾ ಮಲೈ ಹೇಳಿದರು.

ಅವರು ಬುಧವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಗ್ಯಾಸ್ ದರ ಏರಿಕೆ ಬಗ್ಗೆ ಕಾಂಗ್ರೆಸ್ ನಲ್ಲಿ ಆರ್ಥಿಕ ತಜ್ಞರು ಇದ್ದಾರೆ ಅವರು ಹೇಳಬೇಕು ಆದರೆ ಕಾಂಗ್ರೆಸ್ನ ಆರ್ಥಿಕ ತಜ್ಞರು ಸತ್ಯ ಮಾತನಾಡುವುದಿಲ್ಲ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ಯಾಸ್ ದರ ಏರಿಕೆಯಾಗಿದೆ, ಅವಾಗ ದರ ಏರಿಕೆ ಅನಿವಾರ್ಯ, ಏರಿಕೆ ಮಾಡದಿದ್ದಲ್ಲಿ ಒಂದು ಹಂತದ ಮೇಲೆ ಆಯಿಲ್ ಮಾರ್ಕೆಟಿಂಗ್ ಕಂಪನಿಗೂ ಕಷ್ಟವಾಗುತ್ತದೆ. ಆಯಿಲ್ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುವಾಗ ಸರ್ಕಾರ ಮಧ್ಯ ಪ್ರವೇಶಿಸಿ ಏರಿಕೆಯಾಗದಂತೆ ನೋಡಿಕೊಂಡಿದ್ದಾರೆ ಎಂದರು.

ಗ್ಯಾಸ್ ಹೊರದೇಶದಿಂದ ಬರಬೇಕು, ನಮ್ಮಲ್ಲಿ ಉತ್ಪಾದನೆ ಇಲ್ಲ ಆದರೆ ಇತ್ತೀಚಿನ ವರ್ಷಗಳಲ್ಲಿ ಗ್ಯಾಸ್ ಬಳಕೆ ಜಾಸ್ತಿ ಆಗುತ್ತಿದೆ, ಒಂದು ಹಂತದ ಮೇಲೆ ಆಯಿಲ್ ಮಾರ್ಕೆಟಿಂಗ್ ಕಂಪನಿಯವರಿಗೆ ನಷ್ಟಭರಿಸಲು ಸಾಧ್ಯವಾಗಲ್ಲ ಆದ್ದರಿಂದ ಜನರಿಗೆ ಹೊರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ. ಈಗಿನ ಬೆಲೆ ಏರಿಕೆ ಪರಿಸ್ಥಿತಿ ತಾತ್ಕಾಲಿಕ ಎಂದು ಭಾವಿಸುತ್ತೇನೆ ಎಂದರು.

2014ರಲ್ಲಿ ಭಾರತದಲ್ಲಿ ಶೇಕಡ 64 ಜನರಲ್ಲಿ ಮಾತ್ರ ಗ್ಯಾಸ್ ಬಳಕೆಯಲ್ಲಿತ್ತು ಆದರೆ ಇವತ್ತು ಶೇಕಡ 100 ಗ್ಯಾಸ್ ಬಳಸುತ್ತಾರೆ ಆದ್ದರಿಂದ ಗ್ಯಾಸ್ ಅನ್ನು ಹೆಚ್ಚು ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಕೇಂದ್ರ ಸರಕಾರದ ಜೊತೆಗಿರಬೇಕು. ಕೇಂದ್ರ ಪೆಟ್ರೋಲಿಯಂ ಸಚಿವರಾದ ಹರದೀಪ್ ಪುರಿ ಅವರು ವಿಶ್ವಮಟ್ಟದಲ್ಲಿ ಗ್ಯಾಸ್ ಲಭ್ಯತೆ ಹುಡುಕುತ್ತಿದ್ದಾರೆ ಮತ್ತು ಈಗಿನ ಪರಿಸ್ಥಿತಿ ತಾತ್ಕಾಲಿಕ ಎಂದು ನಾನು ನಂಬುತ್ತೇನೆ ಎಂದರು.

‘ನಾನೊಬ್ಬ ಕಾರ್ಯಕರ್ತ,  ಪಕ್ಷ ನನಗೆ ಒಂದು ಜವಾಬ್ದಾರಿ ಕೊಟ್ಟಿತ್ತು, ಅದನ್ನು ನಿಭಾಯಿಸಿದ್ದೇನೆ. ಇನ್ನೊಂದು ಜವಾಬ್ದಾರಿ ಕೊಟ್ಟರು ಕೆಲಸ ಮಾಡುತ್ತೇನೆ’ ಎಂದರು.

ರಾಜಕೀಯದಲ್ಲಿ ಅಧಿಕಾರಕ್ಕಿಂತ ತಾಳ್ಮೆ ಮುಖ್ಯ. ತಾಳ್ಮೆಯಿಂದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಒಂದಲ್ಲ ಒಂದು ದಿನ ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ’ ಎಂದರು.

ಕರ್ನಾಟಕದ ಸರ್ಕಾರ ಜನ ವಿರೋಧಿಯಾಗಿದೆ. ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಏನೆಲ್ಲ ಮಾಡುತ್ತಿದೆ ಎಂಬುದನ್ನು ಇಡೀ ದೇಶ ನೋಡ್ತಾ ಇದೆ. ಬಿಜೆಪಿ ಜನಾಕ್ರೋಶ ಯಾತ್ರೆಗೆ ಜನರು ಜೊತೆಯಾಗಬೇಕು’ ಎಂದು ಹೇಳಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

5 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

5 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

6 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

6 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago