Featured

ಉಡುಪಿ: ಅಕ್ಕಿ ನೀಡದಂತೆ ಕೇಂದ್ರ ಸರ್ಕಾರ ತಡೆಯೊಡ್ಡಿರುವುದು ರಾಜ್ಯದ ಬಡಜನತೆಗೆ ಬಗೆದ ದ್ರೋಹವಾಗಿದೆ : ರಮೇಶ್ ಕಾಂಚನ್ ಆಕ್ರೋಶ – Vishwanews24

ಉಡುಪಿ: ಅಕ್ಕಿ ನೀಡದಂತೆ ಕೇಂದ್ರ ಸರ್ಕಾರ ತಡೆಯೊಡ್ಡಿರುವುದು ರಾಜ್ಯದ ಬಡಜನತೆಗೆ ಬಗೆದ ದ್ರೋಹವಾಗಿದೆ : ರಮೇಶ್ ಕಾಂಚನ್ ಆಕ್ರೋಶ

ಉಡುಪಿ: ಕಾಂಗ್ರೆಸ್ ನೇತೃತ್ವದ ನೂತನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಭಾರತೀಯ ಆಹಾರ ನಿಗಮವು ಅಕ್ಕಿ ಕೊಡಲು ಒಪ್ಪಿಕೊಂಡ ಬಳಿಕ ರಾಜ್ಯಕ್ಕೆ ಅಕ್ಕಿ ನೀಡದಂತೆ ಕೇಂದ್ರ ಸರ್ಕಾರ ತಡೆಯೊಡ್ಡಿರುವುದು ರಾಜ್ಯದ ಬಡಜನತೆಗೆ ಬಗೆದ ದ್ರೋಹವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶಕ್ಕಿಂತ ನಮ್ಮ ದೇಶ ಕೆಳಗಿನ ಸ್ಥಾನದಲ್ಲಿದ್ದರೂ ರಾಜ್ಯಕ್ಕೆ ಅಕ್ಕಿ ನೀಡದೆ ಸತಾಯಿಸುತ್ತಿರುವುದನ್ನು ಕಂಡು ಬಹಳ ಬೇಸರವಾಗುತ್ತಿದೆ. ಭಾರತೀಯ ಆಹಾರ ನಿಗಮದ ಗೋದಾಮಿನಲ್ಲಿ ಪ್ರತಿ ವರ್ಷ ಟನ್ಗಟ್ಟಲೆ ಆಹಾರ ಧಾನ್ಯವು ಕೊಳೆಯುವ ಸ್ಥಿತಿಯಲ್ಲಿದ್ದರೂ ಕರ್ನಾಟಕಕ್ಕೆ ದ್ವೇಷ ಸಾಧಿಸುತ್ತಿರುವ ಬಿಜೆಪಿ ಸರ್ಕಾರವು ನಾವು ಹಣ ನೀಡುತ್ತೇವೆ ಎಂದು ಹೇಳಿದರೂ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಲು ಒಪ್ಪುತ್ತಿಲ್ಲ.

ಪ್ರಧಾನಿ ಮೋದಿಯವರು ನೆರೆಯ ತಾಲಿಬಾನ್ ನೇತೃತ್ವದ ಅಫ್ಘಾನಿಸ್ತಾನ ಸರ್ಕಾರಕ್ಕೆ ಸುಮಾರು 10,000 ಟನ್ಗಳಷ್ಟು ಆಹಾರ ಧಾನ್ಯಗಳನ್ನು ಕಳುಹಿಸಿದ್ದಾರೆ ಆದರೆ ಭಾರತದಲ್ಲಿ ಅತ್ಯಧಿಕ ತೆರಿಗೆ ಸಂಗ್ರಹವಾಗುವ ಕರ್ನಾಟಕ ರಾಜ್ಯಕ್ಕೆ ಅಕ್ಕಿಯನ್ನು ಕೊಡಲು ಸಿದ್ದರಿಲ್ಲ. ಕರ್ನಾಟಕದಿಂದ ಬಿಜೆಪಿಯ 25 ಸಂಸದರನ್ನು ಜನರು ಆರಿಸಿದರೂ ಪ್ರಧಾನಿ ಮೋದಿಯವರ ಮುಂದೆ ಕರ್ನಾಟಕಕ್ಕೆ ನ್ಯಾಯ ಒದಗಿಸುವಂತೆ ಮಾತನಾಡುವ ದಮ್ಮು ತಾಕತ್ತು ಯಾವ ಸಂಸದರಿಗೂ ಇಲ್ಲ. ಕರ್ನಾಟಕದ ಸಂಸದರು ಇನ್ನಾದರೂ ತಮ್ಮ ರಾಜ್ಯಕ್ಕೆ ನ್ಯಾಯ ಒದಗಿಸುವಂತೆ ಪ್ರಧಾನಿ ಮೋದಿಯವರಲ್ಲಿ ಕೇಳಲಿ. ಕೇಂದ್ರ ಬಿಜೆಪಿ ಸರ್ಕಾರವು ದ್ವೇಷ ರಾಜಕಾರಣವನ್ನು ಬಿಟ್ಟು ಕರ್ನಾಟಕದ ಜನತೆಗೆ ಅಕ್ಕಿ ಪೂರೈಕೆ ಮಾಡಲು ಸಹಕಾರಿಯಾಗಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

5 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

5 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago