ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ನೂತನವಾಗಿ ಅಕ್ಕ ಕೆಫೆ ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಕೆಫೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಸಲುವಾಗಿ ಅರ್ಹ ಸ್ವ-ಸಹಾಯ ಗುಂಪುಗಳನ್ನು ಆಯ್ಕೆ ಮಾಡಲು ಏಪ್ರಿಲ್ 13 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಕಡ್ಡಾಯವಾಗಿ ಗ್ರಾಮೀಣ ಅಥವಾ ನಗರ ಸಂಜೀವಿನಿ ಸ್ವ-ಸಹಾಯ ಗುಂಪುಗಳಾಗಿರುವ, ಹೋಟೆಲ್ ಅಥವಾ ಕ್ಯಾಟರಿಂಗ್ ಉದ್ಯಮದಲ್ಲಿ ಅನುಭವ ಹೊಂದಿರುವ ಸ್ಥಳೀಯ ಸ್ವ-ಸಹಾಯ ಗುಂಪುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಭಾಗವಹಿಸುವ ಸ್ವ-ಸಹಾಯ ಗುಂಪುಗಳು ತಾವು ತಯಾರಿಸುವ ಆಹಾರದ ಒಂದು ಮಾದರಿ ಮೆನು ಮತ್ತು ದರದ ಪಟ್ಟಿಯೊಂದಿಗೆ ಹಾಗೂ ತಮ್ಮ ಸಂಘದ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಅವಿನಾಶ್, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕರು, ಮೊ.ನಂ: 9844234080 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ನ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…