ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು. ಭಂಡಾರಿ (19) ಬಂಧಿತ ಆರೋಪಿಗಳು. ಇವರಿಂದ 53,300 ರೂ. ಮೌಲ್ಯದ 740 ಗ್ರಾಂ ತೂಕದ ಗಾಂಜಾ, 25 ಸಾವಿರ ರೂ. ಮೌಲ್ಯದ ಸ್ಕೂಟರ್, 2170ರೂ. ನಗದು, 2 ಮೊಬೈಲ್, ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 98,770ರೂ. ಎಂದು ಅಂದಾಜಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್ ಮತ್ತು ಪ್ರೊಬೆಶನರಿ ಡಿ.ವೈ.ಎಸ್.ಪಿ. ಗೀತಾ ಪಾಟೀಲ್ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸೆನ್ ಪೊಲೀಸ್ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್, ವೆಂಕಟೇಶ್, ನಿಲೇಶ್, ರಾಘವೇಂದ್ರ, ಪ್ರಶಾಂತ್ ಮತ್ತು ಚರಣ್ರಾಜ್ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…