ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು. ಭಂಡಾರಿ (19) ಬಂಧಿತ ಆರೋಪಿಗಳು. ಇವರಿಂದ 53,300 ರೂ. ಮೌಲ್ಯದ 740 ಗ್ರಾಂ ತೂಕದ ಗಾಂಜಾ, 25 ಸಾವಿರ ರೂ. ಮೌಲ್ಯದ ಸ್ಕೂಟರ್, 2170ರೂ. ನಗದು, 2 ಮೊಬೈಲ್, ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 98,770ರೂ. ಎಂದು ಅಂದಾಜಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್ ಮತ್ತು ಪ್ರೊಬೆಶನರಿ ಡಿ.ವೈ.ಎಸ್.ಪಿ. ಗೀತಾ ಪಾಟೀಲ್ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸೆನ್ ಪೊಲೀಸ್ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್, ವೆಂಕಟೇಶ್, ನಿಲೇಶ್, ರಾಘವೇಂದ್ರ, ಪ್ರಶಾಂತ್ ಮತ್ತು ಚರಣ್ರಾಜ್ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…