ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅಕ್ರಮ ಡ್ರಗ್ಸ್ ಸಾಗಾಟ ಜಾಲಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದ್ದು. ಇಬ್ಬರು ವಿದ್ಯಾರ್ಥಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ಎಚ್ಚರಿಕೆ ರವಾನಿಸಿದ್ದಾರೆ.
ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತು ಸಾಗಾಟ, ಸೇವನೆಯಲ್ಲಿ ಶಾಮೀಲಾಗಿರುವ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚೀಂದ್ರ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಲಾಖೆ ಅಧಿಕಾರಿಗಳು ಮಾದಕ ವಸ್ತುಗಳ ಸಾಗಾಟ, ಸೇವನೆ ಮೇಲೆ ಕಳೆದ 6 ತಿಂಗಳಿನಿಂದ ನಿರಂತರ ಪ್ರಕರಣ ದಾಖಲಿಸಿ ಕಂಟ್ರೋಲ್ ಮಾಡುತ್ತಿದ್ದಾರೆ.
ಕೆಲವು ವಿದ್ಯಾರ್ಥಿಗಳು ಕೂಡಾ ಮಾದಕ ದ್ರವ್ಯ ಸಾಗಾಟದಲ್ಲಿ ನಿರತರಾಗಿದ್ದಾರೆ ಎನ್ನುವ ಅಂಶ ತನಿಖೆಯಿಂದ ಬೆಳಕಿಗೆ ಬಂದಿದ್ದು, ಕಾಲೇಜಿನ ಆಡಳಿತ ಮಂಡಳಿಗೆ ಈ ವಿಚಾರವನ್ನು ತಿಳಿಸಿದ್ದೇವೆ.
ಕ್ರಿಮಿನಲ್ ಕೃತ್ಯದಲ್ಲಿ ಯಾರೇ ಭಾಗಿಯಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ನಗರದ ಕಾಲೇಜಿನ ಆಡಳಿತ ಮಂಡಳಿ ಕೂಡಾ ಈ ಬಗ್ಗೆ ಗಂಭೀರ ಕಾನೂನು ಕ್ರಮವವನ್ನು ಅಂತಹ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಭೇಕೆಂದು ಸೂಚನೆ ನೀಡಿದಂತೆ ಈಗಾಗಲೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಇಂತಹ ಮಾದಕ ವಸ್ತುಗಳ ಅಕ್ರಮ ಸಾಗಾಟ, ಸೇವನೆಯಲ್ಲಿ ಭಾಗಿಯಾದರೆ ಯಾರೂ ಕೂಡಾ ನಮ್ಮ ನೆರವಿಗೆ ಬರುವುದಿಲ್ಲ ಎನ್ನುವುದನ್ನು ಅವರು ತಿಳಿದುಕೊಳ್ಳಬೇಕು.
ಈ ಕ್ರಮದ ಮೂಲಕ ಅವರ ಭವಿಷ್ಯವನ್ನು ಹಾಳು ಮಾಡುವ ನಿರ್ಧಾರ ಅಲ್ಲ ಎನ್ನುವುದನ್ನು ನಾವು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಎಸ್ಪಿ ಹಾಕೆ ಅಕ್ಷಯ್ ಮಚೀಂದ್ರ ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…