Featured

ಉಡುಪಿ : ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲ ಪತ್ತೆ , ಆರೋಪಿ ಬಂಧನ -Vishwanews24

ಉಡುಪಿ: ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲವನ್ನು ರೈಲ್ವೆ ರಕ್ಷಣಾ ದಳದ ಅಧಿಕಾರಿಗಳು ಭೇದಿಸಿ ಕಾರವಾರ ಗ್ರೀನ್ ಸ್ವೀಟ್ ನ ಅಬ್ದುಲ್ ನಸೀರ್ ಇಬ್ರಾಹಿಂ ಶೇಖ್ ಎಂಬಾತನನ್ನು ಅ.29 ರಂದು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ನಸೀರ್ ಇಬ್ರಾಹಿಂ ಶೇಖ್ ನಿಂದ ಮುಂಗಡ ಕಾಯ್ದಿರಿಸಿದ 20 ಟಿಕೆಟ್ ಗಳು ಹಾಗೂ ಹಿಂದಿನ ದಿನಾಂಕಗಳ 13 ಟಿಕೆಟ್ ಗಳುಕಂಪ್ಯೂಟರ್ 1020 ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನಿಗೆ 5 ಸಾವಿರ ರೂ. ದಂಡ ವಿಧಿಸಿ ಬಿಡುಗಡೆ ಮಾಡಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಈತ ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐ ಆರ್ ಟಿ ಸಿ ಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟುಗಳನ್ನು ಬುಕ್ ಮಾಡುತ್ತಿದ್ದ. ಅಲ್ಲದೆ ಟಿಕೆಟ್ ಕೇಳಿಕೊಂಡು ಬರುತ್ತಿದ್ದ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ಪರಿಶೀಸಲು ಸ್ಥಳೀಯ ಆರ್ ಪಿ ಎಫ್ ಅಧಿಕಾರಿಗಳು ಕೆಲವು ಗೌಪ್ಯ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್ ಪತ್ತೆಯಾಗಿದೆ.

ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐಆರ್​ಟಿಸಿಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟ್​ಗಳನ್ನು ಬುಕ್ ಮಾಡಿ ಇಡಲಾಗುತ್ತಿತ್ತು. ಟಿಕೆಟ್ ಕೇಳಿ ಬರುವ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಲು ಸ್ಥಳೀಯ ಆರ್​ಪಿಎಫ್ ಅಧಿಕಾರಿಗೆ ಸೂಚನೆ ಬಂದಿತ್ತು. ಅದರಂತೆ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್​ಗಳು ಪತ್ತೆಯಾದವು. ನಕಲಿ ಹೆಸರಿನಲ್ಲಿ ಟಿಕೆಟ್ ಬುಕ್ ಮಾಡುವುದು ರೈಲ್ವೆ ಕಾಯ್ದೆ 143ರ ಪ್ರಕಾರ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ವಶಕ್ಕೆ ಪಡೆದ 20 ಟಿಕೆಟ್​ಗಳನ್ನು ರದ್ದು ಮಾಡಲಾಗಿದೆ. ಅಕ್ರಮ ಎಸಗುತ್ತಿದ್ದ ವಿವಿಧ ಯೂಸರ್ ಐಡಿಗಳನ್ನು ತಡೆ ಹಿಡಿಯಲು ಐಆರ್​ಟಿಸಿಗೆ ಪತ್ರ ಬರೆಯಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago