Featured

ಉಡುಪಿ : ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲ ಪತ್ತೆ , ಆರೋಪಿ ಬಂಧನ -Vishwanews24

ಉಡುಪಿ: ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲವನ್ನು ರೈಲ್ವೆ ರಕ್ಷಣಾ ದಳದ ಅಧಿಕಾರಿಗಳು ಭೇದಿಸಿ ಕಾರವಾರ ಗ್ರೀನ್ ಸ್ವೀಟ್ ನ ಅಬ್ದುಲ್ ನಸೀರ್ ಇಬ್ರಾಹಿಂ ಶೇಖ್ ಎಂಬಾತನನ್ನು ಅ.29 ರಂದು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ನಸೀರ್ ಇಬ್ರಾಹಿಂ ಶೇಖ್ ನಿಂದ ಮುಂಗಡ ಕಾಯ್ದಿರಿಸಿದ 20 ಟಿಕೆಟ್ ಗಳು ಹಾಗೂ ಹಿಂದಿನ ದಿನಾಂಕಗಳ 13 ಟಿಕೆಟ್ ಗಳುಕಂಪ್ಯೂಟರ್ 1020 ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನಿಗೆ 5 ಸಾವಿರ ರೂ. ದಂಡ ವಿಧಿಸಿ ಬಿಡುಗಡೆ ಮಾಡಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಈತ ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐ ಆರ್ ಟಿ ಸಿ ಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟುಗಳನ್ನು ಬುಕ್ ಮಾಡುತ್ತಿದ್ದ. ಅಲ್ಲದೆ ಟಿಕೆಟ್ ಕೇಳಿಕೊಂಡು ಬರುತ್ತಿದ್ದ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ಪರಿಶೀಸಲು ಸ್ಥಳೀಯ ಆರ್ ಪಿ ಎಫ್ ಅಧಿಕಾರಿಗಳು ಕೆಲವು ಗೌಪ್ಯ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್ ಪತ್ತೆಯಾಗಿದೆ.

ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐಆರ್​ಟಿಸಿಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟ್​ಗಳನ್ನು ಬುಕ್ ಮಾಡಿ ಇಡಲಾಗುತ್ತಿತ್ತು. ಟಿಕೆಟ್ ಕೇಳಿ ಬರುವ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಲು ಸ್ಥಳೀಯ ಆರ್​ಪಿಎಫ್ ಅಧಿಕಾರಿಗೆ ಸೂಚನೆ ಬಂದಿತ್ತು. ಅದರಂತೆ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್​ಗಳು ಪತ್ತೆಯಾದವು. ನಕಲಿ ಹೆಸರಿನಲ್ಲಿ ಟಿಕೆಟ್ ಬುಕ್ ಮಾಡುವುದು ರೈಲ್ವೆ ಕಾಯ್ದೆ 143ರ ಪ್ರಕಾರ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ವಶಕ್ಕೆ ಪಡೆದ 20 ಟಿಕೆಟ್​ಗಳನ್ನು ರದ್ದು ಮಾಡಲಾಗಿದೆ. ಅಕ್ರಮ ಎಸಗುತ್ತಿದ್ದ ವಿವಿಧ ಯೂಸರ್ ಐಡಿಗಳನ್ನು ತಡೆ ಹಿಡಿಯಲು ಐಆರ್​ಟಿಸಿಗೆ ಪತ್ರ ಬರೆಯಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago