Featured

ಉಡುಪಿ : ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲ ಪತ್ತೆ , ಆರೋಪಿ ಬಂಧನ -Vishwanews24

ಉಡುಪಿ: ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲವನ್ನು ರೈಲ್ವೆ ರಕ್ಷಣಾ ದಳದ ಅಧಿಕಾರಿಗಳು ಭೇದಿಸಿ ಕಾರವಾರ ಗ್ರೀನ್ ಸ್ವೀಟ್ ನ ಅಬ್ದುಲ್ ನಸೀರ್ ಇಬ್ರಾಹಿಂ ಶೇಖ್ ಎಂಬಾತನನ್ನು ಅ.29 ರಂದು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ನಸೀರ್ ಇಬ್ರಾಹಿಂ ಶೇಖ್ ನಿಂದ ಮುಂಗಡ ಕಾಯ್ದಿರಿಸಿದ 20 ಟಿಕೆಟ್ ಗಳು ಹಾಗೂ ಹಿಂದಿನ ದಿನಾಂಕಗಳ 13 ಟಿಕೆಟ್ ಗಳುಕಂಪ್ಯೂಟರ್ 1020 ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನಿಗೆ 5 ಸಾವಿರ ರೂ. ದಂಡ ವಿಧಿಸಿ ಬಿಡುಗಡೆ ಮಾಡಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಈತ ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐ ಆರ್ ಟಿ ಸಿ ಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟುಗಳನ್ನು ಬುಕ್ ಮಾಡುತ್ತಿದ್ದ. ಅಲ್ಲದೆ ಟಿಕೆಟ್ ಕೇಳಿಕೊಂಡು ಬರುತ್ತಿದ್ದ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ಪರಿಶೀಸಲು ಸ್ಥಳೀಯ ಆರ್ ಪಿ ಎಫ್ ಅಧಿಕಾರಿಗಳು ಕೆಲವು ಗೌಪ್ಯ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್ ಪತ್ತೆಯಾಗಿದೆ.

ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐಆರ್​ಟಿಸಿಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟ್​ಗಳನ್ನು ಬುಕ್ ಮಾಡಿ ಇಡಲಾಗುತ್ತಿತ್ತು. ಟಿಕೆಟ್ ಕೇಳಿ ಬರುವ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಲು ಸ್ಥಳೀಯ ಆರ್​ಪಿಎಫ್ ಅಧಿಕಾರಿಗೆ ಸೂಚನೆ ಬಂದಿತ್ತು. ಅದರಂತೆ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್​ಗಳು ಪತ್ತೆಯಾದವು. ನಕಲಿ ಹೆಸರಿನಲ್ಲಿ ಟಿಕೆಟ್ ಬುಕ್ ಮಾಡುವುದು ರೈಲ್ವೆ ಕಾಯ್ದೆ 143ರ ಪ್ರಕಾರ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ವಶಕ್ಕೆ ಪಡೆದ 20 ಟಿಕೆಟ್​ಗಳನ್ನು ರದ್ದು ಮಾಡಲಾಗಿದೆ. ಅಕ್ರಮ ಎಸಗುತ್ತಿದ್ದ ವಿವಿಧ ಯೂಸರ್ ಐಡಿಗಳನ್ನು ತಡೆ ಹಿಡಿಯಲು ಐಆರ್​ಟಿಸಿಗೆ ಪತ್ರ ಬರೆಯಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

14 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago