Featured

ಉಡುಪಿ : ಅಕ್ರಮ ಹೊಟೇಲ್ ಝರಾ ಕಟ್ಟಡ ವಾರದೊಳಗೆ ತೆರವಿಗೆ ಕ್ರಮಕೈಗೊಳ್ಳಿ: ಯಶ್ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ : ಅಕ್ರಮ ಹೊಟೇಲ್ ಝರಾ ಕಟ್ಟಡ ವಾರದೊಳಗೆ ತೆರವಿಗೆ ಕ್ರಮಕೈಗೊಳ್ಳಿ: ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ನಗರಸಭೆ ವ್ಯಾಪ್ತಿಯ ಮಸೀದಿಯ ರಸ್ತೆಯ ಹೋಟೆಲ್ ಸಹಿತ ಹಲವಾರು ಅಕ್ರಮ ಕಟ್ಟಡಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ನಿರ್ಮಾಣಗೊಂಡ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ನಗರಸಭೆ ಅಧಿಕಾರಿಗಳು ತಕ್ಷಣ ಈ ಬಗ್ಗೆ ಕ್ರಮವಹಿಸಿ ವಾರದೊಳಗೆ ಕಟ್ಟಡಗಳ ತೆರವಿಗೆ ಮುಂದಾಗುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ಬಳಿಯ ಅಂಜುಮಾನ್ ರಸ್ತೆಯ ಝಾರಾ ಹೋಟೆಲ್ 2 ವರ್ಷದ ಹಿಂದೆ ನಗರಸಭೆ ತೆರವುಗೊಳಿಸಿದ್ದ ಜಾಗದಲ್ಲಿಯೇ ಮತ್ತೆ ಅದೇ ಹೋಟೆಲ್ ಅಕ್ರಮವಾಗಿ ತಲೆ ಎತ್ತಿದೆ. ರಸ್ತೆ ಸಂಚಾರಕ್ಕೆ ತೊಡಕಾಗುವಂತೆ ಅಕ್ರಮವಾಗಿ ಕಟ್ಟಡ ನಿರ್ಮಿಸಿರುವ ಬಗ್ಗೆ ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದು, ಈ ಕಟ್ಟಡಕ್ಕೆ ನೀಡಿರುವ ಕಾನೂನು ಮೀರಿ ನೀಡಿರುವ ಅನುಮತಿಯನ್ನು ರದ್ದುಮಾಡಿ ತೆರವುಗೊಳಿಸುವಂತೆ ಈಗಾಗಲೇ ನಗರಸಭೆಗೆ ದೂರುಗಳು ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಕಳೆದ ವರ್ಷದ ಏಪ್ರಿಲ್ ತಿಂಗಳಿನಿಂದ ನಗರಸಭೆಯಲ್ಲಿ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೂ, ಈ ಅವಧಿಯಲ್ಲಿ ಅಧಿಕಾರಿಗಳು ರಾಜಾರೋಷವಾಗಿ ಅಕ್ರಮ ಕಟ್ಟಡಗಳಿಗೆ ಸಹಕಾರ ನೀಡುತ್ತಿದ್ದಾರೆ ಎಂಬ ಆರೋಪ ನಿರಂತರವಾಗಿ ಕೇಳಿ ಬರುತ್ತಿದೆ.

ನಗರಸಭೆಯ ವ್ಯಾಪ್ತಿಯ ಅಕ್ರಮ ಕಟ್ಟಡಗಳ ಬಗ್ಗೆ ಈ ನಿರ್ಲಕ್ಷ ಧೋರಣೆ ಹಾಗೂ ಪರೋಕ್ಷ ಸಹಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಾರದೊಳಗೆ ಈ ಅಕ್ರಮ ಹೋಟೆಲ್ ಕಟ್ಟಡಗಳ ತೆರವಿಗೆ ಮುಂದಾಗದಿದ್ದಲ್ಲಿ, ಸಾರ್ವಜನಿಕರು ಹಾಗೂ ಕಾರ್ಯಕರ್ತರೊಂದಿಗೆ ಈ ಕಟ್ಟಡಗಳ ವಿರುದ್ಧ ಪ್ರತಿಭಟನೆ ನಡೆಸಿ ತೆರವಿಗೆ ಮುಂದಾಗುವ ಸನ್ನಿವೇಶ ಸೃಷ್ಟಿಯಾದರೆ ಮುಂದಿನ ಎಲ್ಲಾ ಬೆಳವಣಿಗೆಗಳಿಗೆ ನಗರಸಭೆ ಪೌರಾಯುಕ್ತರೇ ಹೊಣೆಯಾಗಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago