ಉಡುಪಿ: ನಗರಸಭೆ ವ್ಯಾಪ್ತಿಯ ಮಸೀದಿಯ ರಸ್ತೆಯ ಹೋಟೆಲ್ ಸಹಿತ ಹಲವಾರು ಅಕ್ರಮ ಕಟ್ಟಡಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ನಿರ್ಮಾಣಗೊಂಡ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ನಗರಸಭೆ ಅಧಿಕಾರಿಗಳು ತಕ್ಷಣ ಈ ಬಗ್ಗೆ ಕ್ರಮವಹಿಸಿ ವಾರದೊಳಗೆ ಕಟ್ಟಡಗಳ ತೆರವಿಗೆ ಮುಂದಾಗುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ಬಳಿಯ ಅಂಜುಮಾನ್ ರಸ್ತೆಯ ಝಾರಾ ಹೋಟೆಲ್ 2 ವರ್ಷದ ಹಿಂದೆ ನಗರಸಭೆ ತೆರವುಗೊಳಿಸಿದ್ದ ಜಾಗದಲ್ಲಿಯೇ ಮತ್ತೆ ಅದೇ ಹೋಟೆಲ್ ಅಕ್ರಮವಾಗಿ ತಲೆ ಎತ್ತಿದೆ. ರಸ್ತೆ ಸಂಚಾರಕ್ಕೆ ತೊಡಕಾಗುವಂತೆ ಅಕ್ರಮವಾಗಿ ಕಟ್ಟಡ ನಿರ್ಮಿಸಿರುವ ಬಗ್ಗೆ ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದು, ಈ ಕಟ್ಟಡಕ್ಕೆ ನೀಡಿರುವ ಕಾನೂನು ಮೀರಿ ನೀಡಿರುವ ಅನುಮತಿಯನ್ನು ರದ್ದುಮಾಡಿ ತೆರವುಗೊಳಿಸುವಂತೆ ಈಗಾಗಲೇ ನಗರಸಭೆಗೆ ದೂರುಗಳು ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಕಳೆದ ವರ್ಷದ ಏಪ್ರಿಲ್ ತಿಂಗಳಿನಿಂದ ನಗರಸಭೆಯಲ್ಲಿ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೂ, ಈ ಅವಧಿಯಲ್ಲಿ ಅಧಿಕಾರಿಗಳು ರಾಜಾರೋಷವಾಗಿ ಅಕ್ರಮ ಕಟ್ಟಡಗಳಿಗೆ ಸಹಕಾರ ನೀಡುತ್ತಿದ್ದಾರೆ ಎಂಬ ಆರೋಪ ನಿರಂತರವಾಗಿ ಕೇಳಿ ಬರುತ್ತಿದೆ.
ನಗರಸಭೆಯ ವ್ಯಾಪ್ತಿಯ ಅಕ್ರಮ ಕಟ್ಟಡಗಳ ಬಗ್ಗೆ ಈ ನಿರ್ಲಕ್ಷ ಧೋರಣೆ ಹಾಗೂ ಪರೋಕ್ಷ ಸಹಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ವಾರದೊಳಗೆ ಈ ಅಕ್ರಮ ಹೋಟೆಲ್ ಕಟ್ಟಡಗಳ ತೆರವಿಗೆ ಮುಂದಾಗದಿದ್ದಲ್ಲಿ, ಸಾರ್ವಜನಿಕರು ಹಾಗೂ ಕಾರ್ಯಕರ್ತರೊಂದಿಗೆ ಈ ಕಟ್ಟಡಗಳ ವಿರುದ್ಧ ಪ್ರತಿಭಟನೆ ನಡೆಸಿ ತೆರವಿಗೆ ಮುಂದಾಗುವ ಸನ್ನಿವೇಶ ಸೃಷ್ಟಿಯಾದರೆ ಮುಂದಿನ ಎಲ್ಲಾ ಬೆಳವಣಿಗೆಗಳಿಗೆ ನಗರಸಭೆ ಪೌರಾಯುಕ್ತರೇ ಹೊಣೆಯಾಗಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…