Featured

ಉಡುಪಿ : ಅಕ್ಷತಾ ಪೂಜಾರಿಗೆ ಹಲ್ಲೆ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ಸಿಐಡಿ ತನಿಖೆಗೆ :  ಎಸ್ಪಿ ಹರಿರಾಮ್ ಶಂಕರ್ – vishwanews24

ಉಡುಪಿ : ಅಕ್ಷತಾ ಪೂಜಾರಿಗೆ ಹಲ್ಲೆ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ಸಿಐಡಿ ತನಿಖೆಗೆ :  ಎಸ್ಪಿ ಹರಿರಾಮ್ ಶಂಕರ್

ಉಡುಪಿ : ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಜಾರಿಯಾದ ನ್ಯಾಯಾಲಯದ ವಾರಂಟ್‌ನ ಜಾರಿ ವಿಷಯದಲ್ಲಿ ಇತ್ತೀಚೆಗೆ ಉಂಟಾದ ವಿವಾದದಲ್ಲಿ ಉಪ್ಪೂರಿನ ಅಕ್ಷತಾ ಪೂಜಾರಿ ಎಂಬ ವಿದ್ಯಾರ್ಥಿನಿ ಬ್ರಹ್ಮಾವರ ಪೊಲೀಸರ ವಿರುದ್ಧ ದಾಖಲಿಸಿದ ಪ್ರಕರಣ ಹಾಗೂ ಪೊಲೀಸರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತಂತೆ ಆಕೆಯ ವಿರುದ್ಧ ದಾಖಲಿಸಿದ ಪ್ರಕರಣಗಳೆರಡನ್ನೂ ಸಿಐಡಿ ತನಿಖೆಗೆ ವರ್ಗಾಯಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುವಂತೆ ಡಿಜಿ ಕಚೇರಿಗೆ ಕಳುಹಿಸಿದ ಪ್ರಸ್ತಾಪವನ್ನು ಅಂಗೀಕರಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರು ಹಾಗೂ ಪ್ರತಿದೂರುಗಳೆರಡರ ತನಿಖೆಯನ್ನು ಸಿಐಡಿ ನಡೆಸಲಿದೆ ಎಂದು ಅವರು ತಿಳಿಸಿದರು.

ಇದಕ್ಕೆ ಮುನ್ನ ನೀಡಿದ ಹೇಳಿಕೆಯಲ್ಲಿ ಅವರು ಪ್ರಕರಣಗಳ ತನಿಖೆಯನ್ನು ಮಣಿಪಾಲ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಮೂವರು ಪೊಲೀಸರನ್ನು ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಹೇಳಿದ್ದರು.

ಪ್ರಕರಣದಲ್ಲಿ ನ್ಯಾಯ ಹಾಗೂ ಪಾರದರ್ಶಕತೆಯನ್ನು ಖಚಿತಪಡಿಸಿ ಕೊಳ್ಳಲು ಇವನ್ನು ಮಾಡಲಾಗಿದೆ. ಡಿ.18ರಂದು ಬ್ರಹ್ಮಾವರ ಠಾಣೆ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಕಾರರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಕಾರರು ಠಾಣೆಯ ಮುಂದೆ ಅನುಮತಿ ಇಲ್ಲದೇ ಧ್ವನಿವರ್ದಕ ಬಳಸಿದ್ದ ಕ್ಕಾಗಿ 200ರೂ. ದಂಡ ವಿಧಿಸ ಬಹುದಾದ ಪ್ರಕರಣ ದಾಖಲಿಸಲಾಗಿದೆ. ಪ್ರತಿಭಟನೆಗೆ ಮುನ್ನ ಪೊಲೀಸರು ಆಯೋಜಕರಿಗೆ ನೋಟೀಸು ನೀಡಿದ್ದರೂ ಅನುಮತಿ ಇಲ್ಲದೇ ಅದನ್ನು ಬಳಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಹರಿರಾಂ ಶಂಕರ್ ತಿಳಿಸಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

20 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

20 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

20 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

20 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago