ಉಡುಪಿ: ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ₹ 25 ಲಕ್ಷ ಅನುದಾನ ನೀಡುವ ಭರವಸೆ : ಶಾಸಕ ರಘುಪತಿ ಭಟ್‌ -Vishwanews24

Featured, ಉಡುಪಿ

ಉಡುಪಿ: ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ₹ 25 ಲಕ್ಷ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ನಿಯೋಗ ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಕ್ರೀಡಾಕೂಟ ಆಯೋಜನೆಗೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಮನವಿ ಸ್ಪಂದಿಸಿದ ಸಿಎಂ ₹ 25 ಲಕ್ಷ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ನಿಯೋಗದಲ್ಲಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ರಘುರಾಮ್ ನಾಯಕ್, ಕಾರ್ಯದರ್ಶಿ ದಿನೇಶ್ ಕುಮಾರ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಕಾರ್ಯದರ್ಶಿ ರಾಜವೇಲು, ಡಾ. ಕೃಷ್ಣಪ್ರಸಾಧ್, ಶಿವರಾಜ್ ಹೆಗ್ಡೆ ಇದ್ದರು.