Featured

ಉಡುಪಿ : ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ; 10 ಕೋಟಿ ಪರಿಹಾರ ಮಂಜೂರಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹ – vishwanews24

ಉಡುಪಿ : ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ; 10 ಕೋಟಿ ಪರಿಹಾರ ಮಂಜೂರಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹ

ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, 10 ಕೋಟಿ ಪರಿಹಾರ ಮಂಜೂರಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹ
ನಿನ್ನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅನಾಹುತದಿಂದ ಹಾನಿಗೀಡಾದ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದರು.
ಸ್ಥಳದಲ್ಲಿಯೇ ತಹಶೀಲ್ದಾರ್ ಹಾಗೂ ನಗರಸಭೆಯ ಕಂದಾಯ ಅಧಿಕಾರಿಗಳಿಗೆ ಹಾನಿಯ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿ, ಘಟನೆಯ ಬಗ್ಗೆ ಸ್ಥಳೀಯ ವರ್ತಕರಿಂದ ಮಾಹಿತಿ ಪಡೆದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ಉಡುಪಿಯ ನಗರದಲ್ಲಿ ಬಹುದೊಡ್ಡ ಅಗ್ನಿ ಅವಘಡ ನಡೆದಿದ್ದು, ಕೋಟ್ಯಾಂತರ ರೂಪಾಯಿ ಹಾನಿಯಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ರಾಜ್ಯ ಸರ್ಕಾರ ತಕ್ಷಣ ವಿಶೇಷ ಪ್ರಕರಣದಡಿ 10 ಕೋಟಿ ಪರಿಹಾರ ನೀಡುವಂತೆ ಆಗ್ರಹಿಸುವುದಾಗಿ ತಿಳಿಸಿದರು.
ಅಗ್ನಿಶಾಮಕ ದಳ ತಡವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದೆ ಈ ಬಗ್ಗೆಯೂ ಅಧಿಕಾರಿಗಳ ಬಳಿ ಮಾಹಿತಿ ಪಡೆಯಲಾಗುವುದು. ಉಡುಪಿ ಅಗ್ನಿಶಾಮಕ ದಳಕ್ಕೆ ಹೆಚ್ಚುವರಿ ವಾಹನ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗಿದ್ದು, ಈಗಾಗಲೇ ಪ್ರಗತಿಯಲ್ಲಿರುವ ಮಣಿಪಾಲ ಅಗ್ನಿಶಾಮಕ ದಳದ ಕಾಮಗಾರಿ ಪೂರ್ಣಗೊಳಿಸಿ ಸೇವೆಗೆ ಒದಗಿಸಲು ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಪೌರಾಯುಕ್ತರಾದ ಶ್ರೀ ಮಹಾಂತೇಶ ಹಂಗರಗಿ, ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಮಾಜಿ ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

9 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago