ಉಡುಪಿ: ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಸಮೀಪ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹಲವು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿರುವುದು ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಈ ದುರಂತಕ್ಕೆ ಎಸ್ಡಿಪಿಐ ಉಡುಪಿ ವಿಧಾನಸಭಾ ಕ್ಷೇತ್ರ ಸಮಿತಿ ತೀವ್ರ ವಿಷಾದವನ್ನು ವ್ಯಕ್ತಪಡಿಸುತ್ತದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಮಿತಿಯ ಅಧ್ಯಕ್ಷರಾದ ಅಶ್ರಫ್ ಭಾವ ಅವರು, “ಘಟನೆ ನಡೆದ ಸ್ಥಳದಿಂದ ಅಗ್ನಿಶಾಮಕ ದಳದ ಕಚೇರಿ ಕೇವಲ 2 ಕಿಮೀ ದೂರದಲ್ಲಿದ್ದರೂ, ಅವಘಡ ಸಂಭವಿಸಿದ ಸುಮಾರು 45 ನಿಮಿಷಗಳ ನಂತರ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿರುವುದು ಬೆಂಕಿ ವ್ಯಾಪಕವಾಗಿ ಹರಡಲು ಕಾರಣವಾಗಿದೆ. ಅಗ್ನಿಶಾಮಕ ದಳದ ತಡವಾದ ಪ್ರತಿಕ್ರಿಯೆ ಕುರಿತು ತಕ್ಷಣವೇ ಉನ್ನತ ಮಟ್ಟದ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಆಡಳಿತ ವೈಫಲ್ಯ ಕಂಡುಬಂದಲ್ಲಿ, ಹೊಣೆಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ತೀವ್ರವಾಗಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ:
ಅಲ್ಲದೆ, ಈ ದುರಂತದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಾಪಾರಿಗಳಿಗೆ ಸರ್ಕಾರವು ತಕ್ಷಣ ಮಧ್ಯಂತರ ಪರಿಹಾರ ಘೋಷಿಸಿ, ಸಂಪೂರ್ಣ ನಷ್ಟದ ಸಮೀಕ್ಷೆ ನಡೆಸಿ ಸಮರ್ಪಕ ಪರಿಹಾರಧನವನ್ನು ಬಿಡುಗಡೆ ಮಾಡಬೇಕು. ಕೇವಲ ಆರ್ಥಿಕ ಪರಿಹಾರವಷ್ಟೇ ಅಲ್ಲದೆ, ವ್ಯಾಪಾರ ಪುನರ್ ಸ್ಥಾಪನೆಗಾಗಿ ವಿಶೇಷ ಪ್ಯಾಕೇಜ್ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಗರದ ವಾಣಿಜ್ಯ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತಾ ನಿಯಮಗಳು ಸರಿಯಾಗಿ ಜಾರಿಯಲ್ಲಿದೆಯೇ ಎಂಬುದರ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಅಗತ್ಯ ಮೂಲಸೌಕರ್ಯಗಳ ಕೊರತೆಗಳನ್ನು ತಕ್ಷಣ ಸರಿಪಡಿಸಬೇಕು. ಇಂತಹ ದುರಂತಗಳು ಮರುಕಳಿಸದಂತೆ ಶಾಶ್ವತ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:
ಈ ಸಂಕಷ್ಟದ ಸಂದರ್ಭದಲ್ಲಿ ಹಾನಿಗೊಳಗಾದ ವ್ಯಾಪಾರಿಗಳಿಗೆ ಧೈರ್ಯ ತುಂಬುತ್ತಾ, ಅವರ ಜೊತೆ ಸದಾ ನಿಲ್ಲುವ ಭರವಸೆಯನ್ನು ಎಸ್ಡಿಪಿಐ ವ್ಯಕ್ತಪಡಿಸುತ್ತದೆ. ಸರ್ಕಾರ ತಕ್ಷಣ ಸ್ಪಂದಿಸಿ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಸ್ಪಷ್ಟ ಆಗ್ರಹವಾಗಿದೆ ಎಂದು ಅವರ ಪತ್ರಿಕೆಯ ಪ್ರಕರಣ ಮೂಲಕ ತಿಳಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…