Featured

ಉಡುಪಿ: ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಅನೂಪ್ ಶೆಟ್ಟಿ -Vishwanews24

ಉಡುಪಿ: ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಅನೂಪ್ ಶೆಟ್ಟಿ -Vishwanews24

ಉಡುಪಿ: ಫೈನಾನ್ಸಿನ ಹಣಕಾಸು ವಿಚಾರದಲ್ಲಿ ಮನಸ್ತಾಪ ಉಂಟಾಗಿ ಅಜೇಂದ್ರ ಶೆಟ್ಟಿಯನ್ನು ಕೊಲೆ ಮಾಡಿದ್ದಾಗಿ ಪಾಲುದಾರ ಅನೂಪ್‌ ಶೆಟ್ಟಿ ಒಪ್ಪಿಕೊಂಡಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌ ವಿಷ್ಣುವರ್ಧನ್‌ ಹೇಳಿದರು.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜುಲೈ 30ರಂದು ರಾತ್ರಿ ಕುಂದಾಪುರ ಗ್ರಾಮಾಂತರ ಠಾಣಾ ಸರಹದ್ದಿನ ಕಾಳಾವರ ನಂದಿಕೇಶ್ವರ ಕಛೇರಿಯೊಳಗೆ ಫೈನಾನ್ಸ್ ನಡೆಸಿಕೊಂಡಿದ್ದ. ‘ಅಜೇಂದ್ರ ಶೆಟ್ಟಿಯನ್ನು ಮಾರಕಾಯುಧದಿಂದ ಕಡಿದು ಕೊಲೆ ಮಾಡಿ ಅಜೇಂದ್ರ ಶೆಟ್ಟಿಯ ಕೊರಳಿನಲ್ಲಿದ್ದ ಚಿನ್ನದ ಚೈನ್ ಮತ್ತು ಅವರ ಹೊಸ ಹೊಂಡಾ ಸಿಟಿ ಕಾರನ್ನು ಸುಲಿಗೆ ಮಾಡಿಕೊಂಡು ಹೋಗಿದ್ದು, ಈ ಘಟನೆ ಬಳಿಕ ಈ ಫೈನಾನ್ಸ್ ನಲ್ಲಿ ಪಾಲುಗಾರಿಕೆ ಮಾಡಿಕೊಂಡಿದ್ದ. ಅನೂಪ್ ಶೆಟ್ಟಿಯು ತಲೆಮರೆಸಿಕೊಂಡಿದ್ದರಿಂದ ಈತನ ವಿರುದ್ಧ ಅಜೇಂದ್ರ ಶೆಟ್ಟಿಯ ಅಣ್ಣ ಮಹೇಂದ್ರ ಶೆಟ್ಟಿಯು ನೀಡಿರುವ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಆರೋಪಿಯ ಬಂಧನಕ್ಕಾಗಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಕೆ. ಶ್ರೀಕಾಂತ್ ರವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಮತ್ತು ಬೈಂದೂರು ವೃತ್ತ ನಿರೀಕ್ಷರಾದ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ, ಕುಂದಾಪುರ ಉಪವಿಭಾಗದ ಅಪರಾಧ ಪತ್ತೆ ದಳದ ಸಿಬ್ಬಂದಿಯವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ಆರೋಪಿಯನ್ನು ಜುಲೈ 31 ರಂದು ಗೋವಾ ರಾಜ್ಯದ ಕೋಲ್ವಾ ಬೀಚ್‌ ಬಳಿ ಬಂಧಿಸಲಾಗಿದೆ ಎಂದರು.

ಆರೋಪಿ ಅನೂಪ್‌ ಶೆಟ್ಟಿ ಈ ಮೊದಲು ದುಬಾಯಿ ಮತ್ತು ಸಿಂಗಾಪೂರದಲ್ಲಿ ಕೆಲಸ ಮಾಡಿಕೊಂಡಿದ್ದು ಬಳಿಕ ಊರಿಗೆ ಮರಳಿ ಅಜೇಂದ್ರ ಶೆಟ್ಟಿಯೊಂದಿಗೆ ಸೇರಿಕೊಂಡು ಫೈನಾನ್ಸ್‌ ವ್ಯವಹಾರ ಮಾಡಿಕೊಂಡಿದ್ದ. ಫೈನಾನ್ಸ್‌ ವ್ಯವಹಾರದಲ್ಲಿ ಇಬ್ಬರಿಗೂ ಆಗಿಂದಾಗ್ಗೆ ಗಲಾಟೆಗಳು ನಡೆದಿದ್ದು ಇದೇ ಕೊಲೆಗೆ ಪ್ರಮುಖ ಕಾರಣವಾಗಿದೆ ಎಂದು ಒಪ್ಪಿಕೊಂಡಿರುತ್ತಾನೆ. ಕೊಲೆಯ ಬಗ್ಗೆ ಇನ್ನಷ್ಟು ಮಾಹಿತಿ ಹೆಚ್ಚಿನ ತನಿಖೆಯ ಬಳಿಕ ತಿಳಿಯಲಿದೆ ಎಂದು ವಿಷ್ಣುವರ್ಧನ್‌ ಹೇಳಿದರು.

ಆತನು ಸುಲಿಗೆ ಮಾಡಿಕೊಂಡು ಹೋಗಿರುವ ಕಾರನ್ನು ವಿಶೇಷ ತಂಡದಲ್ಲಿದ್ದ ಬೈಂದೂರು ಸಿಪಿಐ ರವರು ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ವರದಿಯಾದ 24 ಗಂಟೆಯೊಳಗಾಗಿ ಬೇದಿಸುವಲ್ಲಿ ಯಶಸ್ವಿಯಾಗಿ ಸಾರ್ವಜನಿಕರ ಪ್ರಶಂಸೆಗೊಳಗಾಗಿರುತ್ತಾರೆ ಎಂದರು

ಈ ವಿಶೇಷ ತಂಡದಲ್ಲಿ ಶ್ರೀಧರ್ ನಾಯ್ಕ ಪಿ.ಎಸ್.ಐ. ಶಂಕರನಾರಾಯಣ, ನಂಜನಾಯ್ಕ ಪಿ.ಎಸ್.ಐ. ಗಂಗೊಳ್ಳಿ, ಕುಂದಾಪುರ ಗ್ರಾಮಾಂತರ ಠಾಣೆಯ ಪಿ.ಎಸ್.ಐ. ನಿರಂಜನ ಗೌಡರವರೊಂದಿಗೆ ಉಪವಿಭಾಗದ ಸಿಬ್ಬಂದಿಯವರಾದ ಮೋಹನ, ಚಂದ್ರಶೇಖರ ನಾಗೇಂದ್ರ, ಶ್ರೀನಿವಾಸ, ಸಂತೋಷ್ ಕುಮಾರ್, ಸಂತೋಷ್, ರಾಘವೇಂದ್ರ, ರಾಮು, ಸೀತಾರಾಮ, ಸತೀಶ್, ಚಿದಾನಂದ, ಮಧುಸೂಧನ್ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಯವರಾದ ದಿನೇಶ್‌ ಸಹಕರಿಸಿರುತ್ತಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಬಂಧನಕ್ಕಾಗಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಕೆ. ಶ್ರೀಕಾಂತ್ ರವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಮತ್ತು ಬೈಂದೂರು ವೃತ್ತ ನಿರೀಕ್ಷರಾದ ಸಂತೋಷ ಕಾಯ್ಕಿಣಿ, ಶಂಕರನಾರಾಯಣ ಪಿಎಸ್‌ ಐ ಶ್ರೀಧರ್‌ ನಾಯ್ಕ, ಗಂಗೊಳ್ಳಿ ಪಿಎಸ್‌ ಐ ನಂಜಾನಾಯ್ಕ, ಗ್ರಾಮಾಂತರ ಠಾಣೆಯ ಪಿ.ಎಸ್.ಐ. ನಿರಂಜನ ಗೌಡ ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

45 minutes ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

4 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

4 hours ago

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ…

4 hours ago

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ…

4 hours ago

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

5 hours ago