Featured

ಉಡುಪಿ : ಅಡುಗೆ ಅನಿಲ ಬೆಲೆ ಏರಿಕೆ – ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ : ವೆರೋನಿಕಾ ಕಾರ್ನೆಲಿಯೋ ಆಕ್ರೋಶ – Vishwanews24

ಅಡುಗೆ ಅನಿಲ ಬೆಲೆ ಏರಿಕೆ – ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ : ವೆರೋನಿಕಾ ಕಾರ್ನೆಲಿಯೋ ಆಕ್ರೋಶ – Vishwanews24

ಉಡುಪಿ: ಅಡುಗೆ ಅನಿಲದ ಮೇಲೆ ಇಂದಿನಿಂದ 50 ರೂ. ಬೆಲೆ ಏರಿಕೆ ಮಾಡಿರುವ ಬಿಜೆಪಿ ಸರ್ಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕಾರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನ ಆರ್ಥಿಕ ಸಂಕಷ್ಟದಲ್ಲಿ ತೊಳಲಾಡುತ್ತಿದ್ದಾರೆ. ಹೀಗಿರುವಾಗ ಜನಸಾಮಾನ್ಯರ ನಿತ್ಯದ ಬದುಕಿಗೆ ಸುಲಭವಾಗುವ ರೀತಿಯಲ್ಲಿ ಬೆಲೆಗಳನ್ನು ಇಳಿಕೆ ಮಾಡಬೇಕಿತ್ತು. ಆದರೆ ದಿನನಿತ್ಯ ಬಳಕೆಯ ಅಡುಗೆ ಅನಿಲದ ಬೆಲೆಯನ್ನು ಏಕಾಏಕಿ 50 ರೂ. ಏರಿಸಿರುವುದು ಖಂಡನೀಯ. ಈಗಾಗಲೇ ಒಂದು ಸಿಲಿಂಡರ್ ಗೆ 1020 ರೂ. ನೀಡುತ್ತಿದ್ದು, ಇನ್ನು ಮುಂದೆ 1070 ರೂ.ಗಳನ್ನು ನೀಡಿ ಸಿಲಿಂಡರ್‍ ಖರೀದಿಸಬೇಕಾಗುತ್ತದೆ. ಕೆಲಸ ಇಲ್ಲದೆ ಪರದಾಡುತ್ತಿರುವ ಜನರಿಗೆ ಇನ್ನಷ್ಟು ತೊಂದರೆ ನೀಡುತ್ತಿರುವ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲವೇ? ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ ನಿರುದ್ಯೋಗ ಸಮಸ್ಯೆ ಶೇ. 7.8ಕ್ಕೆ ತಲುಪಿದ್ದು ಗರಿಷ್ಠ ಏರಿಕೆ ಕಂಡಿದೆ. ಮಳೆಗಾಲ ಆರಂಭವಾಗಿರುವುದರಿಂದ ಹಣಕಾಸಿಗೂ ಕಷ್ಟ ಇದೆ. ಒಪ್ಪೊತ್ತಿನ ಊಟಕ್ಕೂ ಜನ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ತಾಳ್ಮೆ ಪರೀಕ್ಷೆ ಮಾಡದೆ ಕೂಡಲೇ ಬೆಲೆ ಇಳಿಕೆ ಮಾಡಿ ನೆಮ್ಮದಿಯ ಜೀವನ ಸಾಗಿಸಲು ಜನಸಾಮಾನ್ಯರಿಗೆ ಅನುವು ಮಾಡಿಕೊಡಬೇಕು ಎಂದವರು ಆಗ್ರಹಿಸಿದ್ದಾರೆ.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

7 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

8 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

8 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

8 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

9 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

9 hours ago