ಉಡುಪಿ: ಅಡುಗೆ ಅನಿಲದ ಮೇಲೆ ಇಂದಿನಿಂದ 50 ರೂ. ಬೆಲೆ ಏರಿಕೆ ಮಾಡಿರುವ ಬಿಜೆಪಿ ಸರ್ಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕಾರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನ ಆರ್ಥಿಕ ಸಂಕಷ್ಟದಲ್ಲಿ ತೊಳಲಾಡುತ್ತಿದ್ದಾರೆ. ಹೀಗಿರುವಾಗ ಜನಸಾಮಾನ್ಯರ ನಿತ್ಯದ ಬದುಕಿಗೆ ಸುಲಭವಾಗುವ ರೀತಿಯಲ್ಲಿ ಬೆಲೆಗಳನ್ನು ಇಳಿಕೆ ಮಾಡಬೇಕಿತ್ತು. ಆದರೆ ದಿನನಿತ್ಯ ಬಳಕೆಯ ಅಡುಗೆ ಅನಿಲದ ಬೆಲೆಯನ್ನು ಏಕಾಏಕಿ 50 ರೂ. ಏರಿಸಿರುವುದು ಖಂಡನೀಯ. ಈಗಾಗಲೇ ಒಂದು ಸಿಲಿಂಡರ್ ಗೆ 1020 ರೂ. ನೀಡುತ್ತಿದ್ದು, ಇನ್ನು ಮುಂದೆ 1070 ರೂ.ಗಳನ್ನು ನೀಡಿ ಸಿಲಿಂಡರ್ ಖರೀದಿಸಬೇಕಾಗುತ್ತದೆ. ಕೆಲಸ ಇಲ್ಲದೆ ಪರದಾಡುತ್ತಿರುವ ಜನರಿಗೆ ಇನ್ನಷ್ಟು ತೊಂದರೆ ನೀಡುತ್ತಿರುವ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲವೇ? ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ ನಿರುದ್ಯೋಗ ಸಮಸ್ಯೆ ಶೇ. 7.8ಕ್ಕೆ ತಲುಪಿದ್ದು ಗರಿಷ್ಠ ಏರಿಕೆ ಕಂಡಿದೆ. ಮಳೆಗಾಲ ಆರಂಭವಾಗಿರುವುದರಿಂದ ಹಣಕಾಸಿಗೂ ಕಷ್ಟ ಇದೆ. ಒಪ್ಪೊತ್ತಿನ ಊಟಕ್ಕೂ ಜನ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ತಾಳ್ಮೆ ಪರೀಕ್ಷೆ ಮಾಡದೆ ಕೂಡಲೇ ಬೆಲೆ ಇಳಿಕೆ ಮಾಡಿ ನೆಮ್ಮದಿಯ ಜೀವನ ಸಾಗಿಸಲು ಜನಸಾಮಾನ್ಯರಿಗೆ ಅನುವು ಮಾಡಿಕೊಡಬೇಕು ಎಂದವರು ಆಗ್ರಹಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…