Featured

ಉಡುಪಿ : ಅಡುಗೆ ಅನಿಲ ಬೆಲೆ ಏರಿಕೆ – ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ : ವೆರೋನಿಕಾ ಕಾರ್ನೆಲಿಯೋ ಆಕ್ರೋಶ – Vishwanews24

ಅಡುಗೆ ಅನಿಲ ಬೆಲೆ ಏರಿಕೆ – ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ : ವೆರೋನಿಕಾ ಕಾರ್ನೆಲಿಯೋ ಆಕ್ರೋಶ – Vishwanews24

ಉಡುಪಿ: ಅಡುಗೆ ಅನಿಲದ ಮೇಲೆ ಇಂದಿನಿಂದ 50 ರೂ. ಬೆಲೆ ಏರಿಕೆ ಮಾಡಿರುವ ಬಿಜೆಪಿ ಸರ್ಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕಾರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನ ಆರ್ಥಿಕ ಸಂಕಷ್ಟದಲ್ಲಿ ತೊಳಲಾಡುತ್ತಿದ್ದಾರೆ. ಹೀಗಿರುವಾಗ ಜನಸಾಮಾನ್ಯರ ನಿತ್ಯದ ಬದುಕಿಗೆ ಸುಲಭವಾಗುವ ರೀತಿಯಲ್ಲಿ ಬೆಲೆಗಳನ್ನು ಇಳಿಕೆ ಮಾಡಬೇಕಿತ್ತು. ಆದರೆ ದಿನನಿತ್ಯ ಬಳಕೆಯ ಅಡುಗೆ ಅನಿಲದ ಬೆಲೆಯನ್ನು ಏಕಾಏಕಿ 50 ರೂ. ಏರಿಸಿರುವುದು ಖಂಡನೀಯ. ಈಗಾಗಲೇ ಒಂದು ಸಿಲಿಂಡರ್ ಗೆ 1020 ರೂ. ನೀಡುತ್ತಿದ್ದು, ಇನ್ನು ಮುಂದೆ 1070 ರೂ.ಗಳನ್ನು ನೀಡಿ ಸಿಲಿಂಡರ್‍ ಖರೀದಿಸಬೇಕಾಗುತ್ತದೆ. ಕೆಲಸ ಇಲ್ಲದೆ ಪರದಾಡುತ್ತಿರುವ ಜನರಿಗೆ ಇನ್ನಷ್ಟು ತೊಂದರೆ ನೀಡುತ್ತಿರುವ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲವೇ? ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ ನಿರುದ್ಯೋಗ ಸಮಸ್ಯೆ ಶೇ. 7.8ಕ್ಕೆ ತಲುಪಿದ್ದು ಗರಿಷ್ಠ ಏರಿಕೆ ಕಂಡಿದೆ. ಮಳೆಗಾಲ ಆರಂಭವಾಗಿರುವುದರಿಂದ ಹಣಕಾಸಿಗೂ ಕಷ್ಟ ಇದೆ. ಒಪ್ಪೊತ್ತಿನ ಊಟಕ್ಕೂ ಜನ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ತಾಳ್ಮೆ ಪರೀಕ್ಷೆ ಮಾಡದೆ ಕೂಡಲೇ ಬೆಲೆ ಇಳಿಕೆ ಮಾಡಿ ನೆಮ್ಮದಿಯ ಜೀವನ ಸಾಗಿಸಲು ಜನಸಾಮಾನ್ಯರಿಗೆ ಅನುವು ಮಾಡಿಕೊಡಬೇಕು ಎಂದವರು ಆಗ್ರಹಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

2 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

3 hours ago