Featured

ಉಡುಪಿ: ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆ : ಸೊರಕೆ – VishwaNews24

ಉಡುಪಿ: ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆ : ಸೊರಕೆ

ಅಭ್ಯರ್ಥಿ ಘೋಷಣೆ ವೇಳೆಯೇ ಪಟಾಕಿ ಸಿಡಿಸಿರುವ ಇವರು ಒಂದು ವೇಳೆ ಗೆದ್ದರೆ ಬಾಂಬ್ ಸ್ಫೋಟಿಸಬಹುದು..

ಉಡುಪಿ, : “ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಡುಪಿಗೆ ಬಂದಿರುವ ಹೆಲಿಕಾಪ್ಟರ್ ಮೂಲಕ ಜಿಲ್ಲೆಗೆ ಅಪಾರ ಪ್ರಮಾಣದ ಹಣದ ಗಂಟನ್ನು ತರಲಾಗಿದೆ”ಎಂದು ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ಅವರ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ,”ನನಗೆ ಸಿಕ್ಕಿರುವ ಮಾಹಿತಿಯಂತೆ ಇಂದು ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆಯಾಗಿದೆ. ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆಯೇ ಪಟಾಕಿ ಸಿಡಿಸಿರುವ ಇವರು ಒಂದು ವೇಳೆ ಗೆದ್ದರೆ ಬಾಂಬ್ ಸ್ಫೋಟಿಸಬಹುದು. ಚುನಾವಣೆ ಘೋಷಣೆಗೂ ಮುನ್ನವೇ ನಾವು ನಾಲ್ಕು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ. ಸುಳ್ಳು ಆರೋಪಗಳಿಂದ ಕಳೆದ ನಾವು ಸೋತಿದ್ದೇವೆ” ಎಂದು ಸೊರಕೆ ಹೇಳಿದ್ದಾರೆ.

“ನಾವೂ ಹಿಂದೂಗಳೇ ಹೊರತು ಮೂಲಭೂತವಾದಿಗಳಲ್ಲ. ನಾವು ಪ್ರತಿದಿನವೂ ಪೂಜೆ ಮಾಡುತ್ತೇವೆ. ಕ್ರಿಸ್ತನಿಗೂ ಕೃಷ್ಣನಿಗೂ ಸಾಮ್ಯತೆಗಳಿವೆ. 2014ರಲ್ಲಿ ನಾವು ಮೋದಿಯವರ ಕೈಗೆ ಭಾರತವನ್ನು ಕೊಟ್ಟಾಗ ಭಾರತ ಅಂತರಾಷ್ಟ್ರೀಯ ಬ್ರ್ಯಾಂಡ್ ಆಗಿತ್ತು. ಮೋದಿ ವಿರುದ್ಧ ಸಿಡಿದೆದ್ದ ಏಕೈಕ ವ್ಯಕ್ತಿ ಸಿದ್ದರಾಮಯ್ಯ. ಏಕೆಂದರೆ ಅವರು ನ್ಯಾಯಯುತ ಮತ್ತು ಜನಸ್ನೇಹಿ ಆಡಳಿತ ನೀಡಿದ್ದಾರೆ. ಅವರ ಆಡಳಿತ ಈ ರಾಜ್ಯಕ್ಕೆ ವರದಾನವಾಗಿದೆ. ಪ್ರಮೋದ್ ಮಧ್ವರಾಜ್ ಸೋತಿರುವುದು ಸ್ವಯಂ ತಪ್ಪಿನಿಂದಲೇ ಹೊರತು ಕಾಂಗ್ರೆಸ್ ಕಾರ್ಯಕರ್ತರ ತಪ್ಪಿನಿಂದಲ್ಲ. ನಮ್ಮ ಅಭ್ಯರ್ಥಿ ಪ್ರಸಾದರಾಜ್ ಕಾಂಚನ್ ಅವರು ಬಹಳ ಹಿಂದಿನಿಂದಲೂ ಹೆಚ್ಚಿನ ಉದಾರತೆಯಿಂದ ಕೆಲಸ ಮಾಡಿದವರು. ಅವರಿಗೆ ಉಡುಪಿಯ ನಾಡಿಮಿಡಿತದ ಅರಿವಿದೆ” ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹೇಳಿದರು.

ಇದೇ ಸಂದರ್ಭದಲ್ಲಿ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಲಾಯಿತು.ಬಳಿಕ ಉಡುಪಿ ತಾಲೂಕು ಕಚೇರಿಯಲ್ಲಿ ಪ್ರಸಾದ್‌ರಾಜ್‌ ಕಾಂಚನ್‌ ನಾಮಪತ್ರ ಸಲ್ಲಿಸಿದರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

20 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

22 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

23 hours ago