Featured

ಉಡುಪಿ: ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆ : ಸೊರಕೆ – VishwaNews24

ಉಡುಪಿ: ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆ : ಸೊರಕೆ

ಅಭ್ಯರ್ಥಿ ಘೋಷಣೆ ವೇಳೆಯೇ ಪಟಾಕಿ ಸಿಡಿಸಿರುವ ಇವರು ಒಂದು ವೇಳೆ ಗೆದ್ದರೆ ಬಾಂಬ್ ಸ್ಫೋಟಿಸಬಹುದು..

ಉಡುಪಿ, : “ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಡುಪಿಗೆ ಬಂದಿರುವ ಹೆಲಿಕಾಪ್ಟರ್ ಮೂಲಕ ಜಿಲ್ಲೆಗೆ ಅಪಾರ ಪ್ರಮಾಣದ ಹಣದ ಗಂಟನ್ನು ತರಲಾಗಿದೆ”ಎಂದು ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ಅವರ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ,”ನನಗೆ ಸಿಕ್ಕಿರುವ ಮಾಹಿತಿಯಂತೆ ಇಂದು ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆಯಾಗಿದೆ. ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆಯೇ ಪಟಾಕಿ ಸಿಡಿಸಿರುವ ಇವರು ಒಂದು ವೇಳೆ ಗೆದ್ದರೆ ಬಾಂಬ್ ಸ್ಫೋಟಿಸಬಹುದು. ಚುನಾವಣೆ ಘೋಷಣೆಗೂ ಮುನ್ನವೇ ನಾವು ನಾಲ್ಕು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ. ಸುಳ್ಳು ಆರೋಪಗಳಿಂದ ಕಳೆದ ನಾವು ಸೋತಿದ್ದೇವೆ” ಎಂದು ಸೊರಕೆ ಹೇಳಿದ್ದಾರೆ.

“ನಾವೂ ಹಿಂದೂಗಳೇ ಹೊರತು ಮೂಲಭೂತವಾದಿಗಳಲ್ಲ. ನಾವು ಪ್ರತಿದಿನವೂ ಪೂಜೆ ಮಾಡುತ್ತೇವೆ. ಕ್ರಿಸ್ತನಿಗೂ ಕೃಷ್ಣನಿಗೂ ಸಾಮ್ಯತೆಗಳಿವೆ. 2014ರಲ್ಲಿ ನಾವು ಮೋದಿಯವರ ಕೈಗೆ ಭಾರತವನ್ನು ಕೊಟ್ಟಾಗ ಭಾರತ ಅಂತರಾಷ್ಟ್ರೀಯ ಬ್ರ್ಯಾಂಡ್ ಆಗಿತ್ತು. ಮೋದಿ ವಿರುದ್ಧ ಸಿಡಿದೆದ್ದ ಏಕೈಕ ವ್ಯಕ್ತಿ ಸಿದ್ದರಾಮಯ್ಯ. ಏಕೆಂದರೆ ಅವರು ನ್ಯಾಯಯುತ ಮತ್ತು ಜನಸ್ನೇಹಿ ಆಡಳಿತ ನೀಡಿದ್ದಾರೆ. ಅವರ ಆಡಳಿತ ಈ ರಾಜ್ಯಕ್ಕೆ ವರದಾನವಾಗಿದೆ. ಪ್ರಮೋದ್ ಮಧ್ವರಾಜ್ ಸೋತಿರುವುದು ಸ್ವಯಂ ತಪ್ಪಿನಿಂದಲೇ ಹೊರತು ಕಾಂಗ್ರೆಸ್ ಕಾರ್ಯಕರ್ತರ ತಪ್ಪಿನಿಂದಲ್ಲ. ನಮ್ಮ ಅಭ್ಯರ್ಥಿ ಪ್ರಸಾದರಾಜ್ ಕಾಂಚನ್ ಅವರು ಬಹಳ ಹಿಂದಿನಿಂದಲೂ ಹೆಚ್ಚಿನ ಉದಾರತೆಯಿಂದ ಕೆಲಸ ಮಾಡಿದವರು. ಅವರಿಗೆ ಉಡುಪಿಯ ನಾಡಿಮಿಡಿತದ ಅರಿವಿದೆ” ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹೇಳಿದರು.

ಇದೇ ಸಂದರ್ಭದಲ್ಲಿ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಲಾಯಿತು.ಬಳಿಕ ಉಡುಪಿ ತಾಲೂಕು ಕಚೇರಿಯಲ್ಲಿ ಪ್ರಸಾದ್‌ರಾಜ್‌ ಕಾಂಚನ್‌ ನಾಮಪತ್ರ ಸಲ್ಲಿಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago