Featured

ಉಡುಪಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು : ಅಧಿಕಾರಿಗಳಿಗೆ ಶೋಭಾ ಕರಂದ್ಲಾಜೆ -Vishwanews24

ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ  ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅತಿವೃಷ್ಟಿ ಅವಲೋಕನ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 4 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಭಾಗಶಃ ಹಾನಿಯಾದ ಮನೆಗಳು ಗರಿಷ್ಠ ಸಂಖ್ಯೆಯಲ್ಲಿದ್ದು, ಈ ಮನೆಗಳ ಹಾನಿಯ ಕುರಿತು ಪುನಃ ಪರಿಶೀಲಿಸಿ, ಗರಿಷ್ಠ ಮೊತ್ತದ ಪರಿಹಾರ ವಿತರಿಸುವಂತೆ ಎಲ್ಲ ತಹಸೀಲ್ದಾರ್‌ಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಸಮುದ್ರ ಕೊರೆತ ತಡೆಯುವ ಕುರಿತಂತೆ ಸೂಕ್ತ ಯೋಜನೆ ರೂಪಿಸಿ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಸದರು ಸೂಚಿಸಿದರು. ಮುಂದಿನ ವರ್ಷಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಬಜೆ ಡ್ಯಾಮ್‌ನಲ್ಲಿ ತುಂಬಿರುವ ಹೂಳನ್ನು ತೆಗೆಯುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು.

ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 hour ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 hour ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

5 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

5 hours ago