ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತ್ಯುತ್ತಮ ಪ್ರಗತಿಪರ ಬಜೆಟನ್ನು ಮಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಕಾಲ – ಕರ್ತವ್ಯದ ಕಾಲ ಎಂಬ ಕರೆಯನ್ನು ಈ ಬಜೆಟ್ ಮೂಲಕ ಜಾರಿಗೊಳಿಸಿದ್ದಾರೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶಾ ನಾಯಕ್ ಹೇಳಿದ್ದಾರೆ
ಬೊಮ್ಮಾಯಿ ಅವರು ಕಳೆದ ವರ್ಷದ ಬಜೆಟ್ ಮೂಲಕ ರಾಜ್ಯದ ಆರ್ಥಿಕ ಬೆಳವಣಿಗೆಯಲ್ಲಿ ಶೇ 7.9, ತಲಾದಾಯ 2.40 ಲಕ್ಷದಿಂದ 3.32 ಲಕ್ಷ ರೂ., ಜಿಎಸ್ ಟಿ ಸಂಗ್ರಹದಲ್ಲಿ ಶೇ 26, ರಾಜ್ಯ ತೆರಿಗೆಯಲ್ಲಿ ಶೇ 21 ಮತ್ತು ಕೇಂದ್ರ ತೆರಿಗೆಯ ಪಾಲು ಶೇ 25ರಷ್ಟು ಹೆಚ್ಚಿಸಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿರಗೊಳಿಸಿದ್ದಾರೆ. ಈ ಬಾರಿ ಮತ್ತೇ ರಾಜ್ಯದ ಪ್ರಗತಿಯ ಗತಿಗೆ ವೇಗ ನೀಡುವಂತಹ ಬಜೆಟ್ ಮಂಡಿಸಿದ್ದಾರೆ.
ರೈತರಿಗಾಗಿ ರೈತ ಉನ್ನತಿ, ಕೃಷಿ ಸಿರಿ, ಸಹಸ್ರ ಸರೋವರ, ಸಹ್ಯಾದ್ರಿ ಸಿರಿ, ಜಲನಿಧಿ ಯೋಜನೆಗಳು, ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ 3,500 ಕೋಟಿ ರು.ಗಳ ಬೆಂಬಲ ಬೆಲೆ ಆವರ್ತ ನಿಧಿ, ಬಡವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಮಕ್ಕಳ ಬಸ್ಸು, ಹಳ್ಳಿ ಮುತ್ತುನ ಯೋಜನೆಗಳು, ತಾಯಿ ಮತ್ತುಮಕ್ಕಳಿಗಾಗಿ ಜೀವ ಸುಧೆ, ವಾತ್ಸಲ್ಯ, ನಗು ಮಗು, ಯುವಜನಿರಿಗಾಗಿ ನಸ್ವಾಮೀ ವಿವೇಕಾನಂದ ಯುವಶಕ್ತಿ, ಬದುಕುವ ದಾರಿ, ಯುವಸ್ನೇಹಿ, ಗ್ರಾಮೀಣ ಸೇವೆಗಾಗಿ ಜನಸೇವಕ ಇತ್ಯಾದಿ ಯೋಜನೆಗಳನ್ನು ಬೊಮ್ಮಾಯಿಯವರು ಮಂಡಿಸಿದ್ದು, ಇದು ರಾಜ್ಯದ ಮುಂದಿನ ಪ್ರಗತಿಯ ಮಾರ್ಗಸೂಚಿಯಾಗಿದೆ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಸಿಫುಡ್ ಪಾರ್ಕ್ ಮತ್ತು ಮರೀನಾ ಸ್ಥಾಪನೆ, ನಾರಾಯಣಗುರು ವಸತಿ ಶಾಲೆ, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಆರ್ ಝಡ್ ಸಡಿಲಿಕೆ, ಗೇರು ಲೀಸ್ ಭೂಮಿಯನ್ನು ರೈತರಿಗೆ ಖಾಯಂಗೊಳಿಸುವ ನಿರ್ಧಾರ, ಕಂಬಳ ಮತ್ತು ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಗ್ರಾಮೀಣ ಕ್ರೀಡಾಂಗಣಗಳ ನಿರ್ಮಾಣದಂತಹ ಯೋಜನೆಗಳನ್ನು ನೀಡಿರುವ ಮುಖ್ಯಮಂತ್ರಿಗಳಿಗೆ ಶ್ರೀಶಾ ನಾಯಕ್ ಕೃತಜ್ಞತೆ ಸಲ್ಲಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…