Featured

ಉಡುಪಿ : ಅತ್ಯುತ್ತಮ ಪ್ರಗತಿಪರ ಬಜೆಟ್ : ಶ್ರೀಶಾ ನಾಯಕ್ -Vishwanews24

ಉಡುಪಿ : ಅತ್ಯುತ್ತಮ ಪ್ರಗತಿಪರ ಬಜೆಟ್ : ಶ್ರೀಶಾ ನಾಯಕ್

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತ್ಯುತ್ತಮ ಪ್ರಗತಿಪರ ಬಜೆಟನ್ನು ಮಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಕಾಲ – ಕರ್ತವ್ಯದ ಕಾಲ ಎಂಬ ಕರೆಯನ್ನು ಈ ಬಜೆಟ್ ಮೂಲಕ ಜಾರಿಗೊಳಿಸಿದ್ದಾರೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶಾ ನಾಯಕ್ ಹೇಳಿದ್ದಾರೆ

ಬೊಮ್ಮಾಯಿ ಅವರು ಕಳೆದ ವರ್ಷದ ಬಜೆಟ್ ಮೂಲಕ ರಾಜ್ಯದ ಆರ್ಥಿಕ ಬೆಳವಣಿಗೆಯಲ್ಲಿ ಶೇ 7.9, ತಲಾದಾಯ 2.40 ಲಕ್ಷದಿಂದ 3.32 ಲಕ್ಷ ರೂ., ಜಿಎಸ್ ಟಿ ಸಂಗ್ರಹದಲ್ಲಿ ಶೇ 26, ರಾಜ್ಯ ತೆರಿಗೆಯಲ್ಲಿ ಶೇ 21 ಮತ್ತು ಕೇಂದ್ರ ತೆರಿಗೆಯ ಪಾಲು ಶೇ 25ರಷ್ಟು ಹೆಚ್ಚಿಸಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿರಗೊಳಿಸಿದ್ದಾರೆ. ಈ ಬಾರಿ ಮತ್ತೇ ರಾಜ್ಯದ ಪ್ರಗತಿಯ ಗತಿಗೆ ವೇಗ ನೀಡುವಂತಹ ಬಜೆಟ್ ಮಂಡಿಸಿದ್ದಾರೆ.

ರೈತರಿಗಾಗಿ ರೈತ ಉನ್ನತಿ, ಕೃಷಿ ಸಿರಿ, ಸಹಸ್ರ ಸರೋವರ, ಸಹ್ಯಾದ್ರಿ ಸಿರಿ, ಜಲನಿಧಿ ಯೋಜನೆಗಳು, ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ 3,500 ಕೋಟಿ ರು.ಗಳ ಬೆಂಬಲ ಬೆಲೆ ಆವರ್ತ ನಿಧಿ, ಬಡವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಮಕ್ಕಳ ಬಸ್ಸು, ಹಳ್ಳಿ ಮುತ್ತುನ ಯೋಜನೆಗಳು, ತಾಯಿ ಮತ್ತುಮಕ್ಕಳಿಗಾಗಿ ಜೀವ ಸುಧೆ, ವಾತ್ಸಲ್ಯ, ನಗು ಮಗು, ಯುವಜನಿರಿಗಾಗಿ ನಸ್ವಾಮೀ ವಿವೇಕಾನಂದ ಯುವಶಕ್ತಿ, ಬದುಕುವ ದಾರಿ, ಯುವಸ್ನೇಹಿ, ಗ್ರಾಮೀಣ ಸೇವೆಗಾಗಿ ಜನಸೇವಕ ಇತ್ಯಾದಿ ಯೋಜನೆಗಳನ್ನು ಬೊಮ್ಮಾಯಿಯವರು ಮಂಡಿಸಿದ್ದು, ಇದು ರಾಜ್ಯದ ಮುಂದಿನ ಪ್ರಗತಿಯ ಮಾರ್ಗಸೂಚಿಯಾಗಿದೆ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಸಿಫುಡ್ ಪಾರ್ಕ್ ಮತ್ತು ಮರೀನಾ ಸ್ಥಾಪನೆ, ನಾರಾಯಣಗುರು ವಸತಿ ಶಾಲೆ, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಆರ್ ಝಡ್ ಸಡಿಲಿಕೆ, ಗೇರು ಲೀಸ್ ಭೂಮಿಯನ್ನು ರೈತರಿಗೆ ಖಾಯಂಗೊಳಿಸುವ ನಿರ್ಧಾರ, ಕಂಬಳ ಮತ್ತು ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಗ್ರಾಮೀಣ ಕ್ರೀಡಾಂಗಣಗಳ ನಿರ್ಮಾಣದಂತಹ ಯೋಜನೆಗಳನ್ನು ನೀಡಿರುವ ಮುಖ್ಯಮಂತ್ರಿಗಳಿಗೆ ಶ್ರೀಶಾ ನಾಯಕ್ ಕೃತಜ್ಞತೆ ಸಲ್ಲಿಸಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

22 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

23 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

23 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

23 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

23 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

23 hours ago