Featured

ಉಡುಪಿ: ಅಧಿಕಾರದ ಅಮಲಿನಲ್ಲಿ ಏನೇ ಮಾಡಿದರೂ ನಡೆಯುತ್ತದೆ ಎನ್ನುವುದು ಸರಿಯಲ್ಲ: ಸರಕಾರಕ್ಕೆ ವಜ್ರದೇಹಿ ಸ್ವಾಮೀಜಿ – Vishwanews24

ಉಡುಪಿ: ಅಧಿಕಾರದ ಅಮಲಿನಲ್ಲಿ ಏನೇ ಮಾಡಿದರೂ ನಡೆಯುತ್ತದೆ ಎನ್ನುವುದು ಸರಿಯಲ್ಲ:  ಸರಕಾರಕ್ಕೆ ವಜ್ರದೇಹಿ ಸ್ವಾಮೀಜಿ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆದಿರುವುದನ್ನು ವಿರೋಧಿಸಿ ವಿಶ್ವಹಿಂದು ಪರಿಷತ್ ಹಾಗೂ ಬಜರಂಗದಳ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪತ್ರಿಭಟನೆ ನಡೆಸಿ, ರಾಜ್ಯ ಸರಕಾರದ ನಿರ್ಧಾರಕ್ಕೆ ಧಿಕ್ಕಾರ ಘೋಷಿಸಿದರು.

ವಜ್ರಾದೇಹಿಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಮಾತನಾಡಿ, ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿಯವರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರದ ಅಮಲಿನಲ್ಲಿ ಏನೇ ಮಾಡಿದರೂ ನಡೆಯುತ್ತದೆ ಎನ್ನುವುದು ಸರಿಯಲ್ಲ. ಹಿಂದು ಧರ್ಮದ ಅವಹೇಳನ ಮಾಡುವುದನ್ನು ಬಿಟ್ಟು ಅಧಿಕಾರ ನಡೆಸಿ, ಸಮಾಜದ ಉನ್ನತಿ, ಸಮುದಾಯದ ಏಳ್ಗೆಗಾಗಿ ಕೆಲಸ ಮಾಡಿ, ಹಿಂದುಗಳ ಧಮನ ನೀತಿ ಕೈಬಿಡಿ. ಇಲ್ಲವಾದರೆ ಮುಂದಿನ ಆರು ತಿಂಗಳಲ್ಲಿ ಉತ್ತರ ಸಿಗಲಿದೆ ಎಂದರು. ರಾಜ್ಯದ ಮಠಾಧೀಶರು ಹಿಂದು ಸಮಾಜವನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಒಂದಾಗಬೇಕು ಎಂದು ಮನವಿ ಮಾಡಿದರು.

ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್. ಮಾತನಾಡಿ, ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯ ಸರಕಾರ ವಾಪಸ್ ಪಡೆಯುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಹಿಂದು ವಿರೋಧಿ ನೀತಿಯನ್ನು ಮುನ್ನೆಲೆಗೆ ತರುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡುತ್ತಿದೆ. ದೇಶದಲ್ಲಿ 60 ವರ್ಷಕ್ಕೂ ಹೆಚ್ಚುಕಾಲ ಸರಕಾರಗಳು ಅಲ್ಪಸಂಖ್ಯಾಕರ ಪರವಾಗಿ ತುಷ್ಠೀಕರಣ ಮಾಡಿದೆ. ತತ್ ಕ್ಷಣ ಸರಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕು. ಮುಂದೆ ಉಗ್ರ ಹೋರಾಟ ಮಾಡಲಿದ್ದೇವೆ. ಪಠ್ಯ ಪರಿಷ್ಕರಣೆ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ವಿಷ್ಣುಮೂರ್ತಿ ಆಚಾರ್ಯ, ವಿಎಚ್ ಪಿ ಜಿಲ್ಲಾ ದಿನೇಶ್ ಮೆಂಡನ್, ಶಾಸಕರಾದ ಯಶ್ ಪಾಲ್ ಸುವರ್ಣ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪ್ರಮುಖರಾದ ಚೇತನ್ ಪೇರಲ್ಕೆ, ಕೆ. ಉದಯ ಕುಮಾರ್ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ರಾಘವೇಂದ್ರ ಕಿಣಿ, ಶ್ಯಾಮಲಾ ಕುಂದರ್, ಸುಮಿತ್ರಾ ಆರ್. ನಾಯಕ್, ಅಂಡಾರು ದೇವಿ ಪ್ರಸಾದ್ ಶೆಟ್ಟಿ ಸಹಿತ ವಿಎಚ್ ಪಿ, ಬಜರಂಗದಳ, ಬಿಜೆಪಿಯ ಪ್ರಮುಖರು ಪ್ರತಿಭಟನೆಯಲ್ಲಿದ್ದರು.

Vishwa News 24

Recent Posts

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

32 seconds ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

21 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

21 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

21 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago