Featured

ಉಡುಪಿ:  ಅಧಿಕ ಲಾಭಾಂಶದ ಆಮಿಷ : ಬ್ಯಾಂಕ್‌ ಮ್ಯಾನೇಜರ್‌ಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ – vishwanews24

ಉಡುಪಿ:  ಅಧಿಕ ಲಾಭಾಂಶದ ಆಮಿಷ : ಬ್ಯಾಂಕ್‌ ಮ್ಯಾನೇಜರ್‌ಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ

ಉಡುಪಿ: ಬ್ಯಾಂಕ್‌ ಮ್ಯಾನೇಜರ್‌ವೊಬ್ಬರಿಗೆ ಅಧಿಕ ಲಾಭಾಂಶದ ಆಮಿಷವೊಡ್ಡಿದ ಆನ್‌ಲೈನ್‌ ವಂಚಕರು ಅವರ ಖಾತೆಯಿಂದಲೇ 14 ಲಕ್ಷ ರೂ.ಗಳನ್ನು ಹಂತ-ಹಂತವಾಗಿ ವರ್ಗಾಯಿಸಿಕೊಂಡ ಘಟನೆ ನಡೆದಿದೆ.

ದೊಂಡೇರಂಗಡಿಯಲ್ಲಿರುವ ಬ್ಯಾಂಕೊಂದರ ಮ್ಯಾನೇಜರ್‌ ಪವನ್‌ ಕುಮಾರ್‌ ವಂಚನೆಗೆ ಒಳಗಾದವರು. ಯಾರೋ ಅಪರಿಚಿತರು ಪವನ್‌ ಕುಮಾರ್‌ ಅವರನ್ನು C22 Investment Alliance Trading ಎಂಬ ವಾಟ್ಸಾಪ್‌ ಗ್ರೂಪ್‌ಗೆ ಸೇರ್ಪಡೆ ಮಾಡಿದ್ದರು.

ಅನಂತರ ಅವರ ಮೊಬೈಲ್‌ನಿಂದ ಷೇರು ಮಾರುಕಟ್ಟೆಯ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಪವನ್‌ ಕುಮಾರ್‌ ಅವರನ್ನು ನಂಬಿಸಿ ಹೆಚ್ಚಿನ ಲಾಭಾಂಶ ಪಡೆಯಬಹುದೆಂಬ ಆಸೆ ತೋರಿಸಿದ್ದಾರೆ. ಬಳಿಕ Causeway App ಮೂಲಕ ಹಣವನ್ನು ಹೂಡಿಕೆ ಮಾಡಲು ತಿಳಿಸಿದ್ದಾರೆ.
ಇದನ್ನು ನಂಬಿದ ಅವರು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗ ಳಿಗೆ ಅ.7ರಿಂದ 19ರವರೆಗೆ ಹಂತ ಹಂತವಾಗಿ 14,00,000 ರೂ.ಗಳನ್ನು ಹೂಡಿಕೆ ಮಾಡಿದ್ದಾರೆ. ಆದರೆ ಆರೋಪಿಗಳು ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೆ ವಂಚನೆ ಎಸಗಿದ್ದಾರೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

2 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

2 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

3 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

3 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

4 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

4 hours ago