ಕುಂದಾಪುರ: ಉಡುಪಿ ಜಿಲ್ಲೆಯ ಶಾಸಕರುಗಳು ಈ ಭಾರಿಯ ಮಳೆಗಾಲದ ಅಧಿವೇಶನದಲ್ಲಿ ಒಂದಷ್ಟು ಸಮಯವನ್ನು ಕರಾವಳಿಯ ರೈತರ ಸಂಕಷ್ಟ, ಸಮಸ್ಯೆಗಳ ಚರ್ಚೆಗೆ ಮೀಸಲಾಗಿಡುವಂತೆ ಕುಂದಾಪುರ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಆಗೃಹಿಸಿದ್ದಾರೆ.
ಕರಾವಳಿಯಲ್ಲಿ ಈ ಭಾರಿ ವಾಡಿಕೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು ವಿಶೇಷವಾಗಿ ಭತ್ತ ಹಾಗೂ ಅಡಿಕೆ ಬೆಳೆಗಳು ಭೀಕರ ಮಳೆಗೆ ಸಂಪೂರ್ಣ ನಾಶಗೊಂಡು ರೈತರು ಅತೀವ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಡಿಕೆ ಕೊಳೆ ರೋಗ ಬಾರದಂತೆ ಔಷಧಿ ಸಿಂಪಡಣೆಯನ್ನು ಹಲವು ಭಾರಿ ಮಾಡಿದರೂ ಕೂಡ ಅತೀವ ಮಳೆಯಿಂದ ಅಡಿಕೆ ಫಸಲು ಸಂಪೂರ್ಣ ನಾಶವಾಗಿದೆ. ಕರಾವಳಿಯ ರೈತರು ಜೀವನೋಪಾಯಕ್ಕೆ ಅಡಿಕೆ, ಭತ್ತ, ತೆಂಗು ಇತ್ಯಾದಿ ಬೆಳೆಗಳನ್ನೇ ಹೆಚ್ಚಾಗಿ ನಂಬಿದ್ದು ಈ ಕೃಷಿ ನಾಶದಿಂದ ಕಂಗಾಲಾಗಿದ್ದಾರೆ. ಆದುದರಿಂದ ಜಿಲ್ಲೆಯ ಶಾಸಕರುಗಳು ಅಧಿವೇಶನದಲ್ಲಿ ಪ್ರಶ್ನೆಗಳಲ್ಲದೆ ಒಂದಷ್ಟು ಅವಧಿಯನ್ನು ಕರಾವಳಿಯ ರೈತರ ಸಮಸ್ಯೆಗಳನ್ನು ಮಾತ್ರ ಚರ್ಚಿಸಲು ಮೀಸಲು ಇಡುವಂತೆ ಹಾಗೂ ಕೃಷಿ ಹಾನಿಗೆ ದೊಡ್ಡ ಪ್ರಮಾಣದ ಪರಿಹಾರ ಮೊತ್ತ ನೀಡುವಂತೆ ಸರ್ಕಾರದ ಗಮನ ಸೆಳೆಯಬೇಕಾಗಿ ಕುಂದಾಪುರ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗೃಹಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…