ಕುಂದಾಪುರ: ಉಡುಪಿ ಜಿಲ್ಲೆಯ ಶಾಸಕರುಗಳು ಈ ಭಾರಿಯ ಮಳೆಗಾಲದ ಅಧಿವೇಶನದಲ್ಲಿ ಒಂದಷ್ಟು ಸಮಯವನ್ನು ಕರಾವಳಿಯ ರೈತರ ಸಂಕಷ್ಟ, ಸಮಸ್ಯೆಗಳ ಚರ್ಚೆಗೆ ಮೀಸಲಾಗಿಡುವಂತೆ ಕುಂದಾಪುರ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಆಗೃಹಿಸಿದ್ದಾರೆ.
ಕರಾವಳಿಯಲ್ಲಿ ಈ ಭಾರಿ ವಾಡಿಕೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು ವಿಶೇಷವಾಗಿ ಭತ್ತ ಹಾಗೂ ಅಡಿಕೆ ಬೆಳೆಗಳು ಭೀಕರ ಮಳೆಗೆ ಸಂಪೂರ್ಣ ನಾಶಗೊಂಡು ರೈತರು ಅತೀವ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಡಿಕೆ ಕೊಳೆ ರೋಗ ಬಾರದಂತೆ ಔಷಧಿ ಸಿಂಪಡಣೆಯನ್ನು ಹಲವು ಭಾರಿ ಮಾಡಿದರೂ ಕೂಡ ಅತೀವ ಮಳೆಯಿಂದ ಅಡಿಕೆ ಫಸಲು ಸಂಪೂರ್ಣ ನಾಶವಾಗಿದೆ. ಕರಾವಳಿಯ ರೈತರು ಜೀವನೋಪಾಯಕ್ಕೆ ಅಡಿಕೆ, ಭತ್ತ, ತೆಂಗು ಇತ್ಯಾದಿ ಬೆಳೆಗಳನ್ನೇ ಹೆಚ್ಚಾಗಿ ನಂಬಿದ್ದು ಈ ಕೃಷಿ ನಾಶದಿಂದ ಕಂಗಾಲಾಗಿದ್ದಾರೆ. ಆದುದರಿಂದ ಜಿಲ್ಲೆಯ ಶಾಸಕರುಗಳು ಅಧಿವೇಶನದಲ್ಲಿ ಪ್ರಶ್ನೆಗಳಲ್ಲದೆ ಒಂದಷ್ಟು ಅವಧಿಯನ್ನು ಕರಾವಳಿಯ ರೈತರ ಸಮಸ್ಯೆಗಳನ್ನು ಮಾತ್ರ ಚರ್ಚಿಸಲು ಮೀಸಲು ಇಡುವಂತೆ ಹಾಗೂ ಕೃಷಿ ಹಾನಿಗೆ ದೊಡ್ಡ ಪ್ರಮಾಣದ ಪರಿಹಾರ ಮೊತ್ತ ನೀಡುವಂತೆ ಸರ್ಕಾರದ ಗಮನ ಸೆಳೆಯಬೇಕಾಗಿ ಕುಂದಾಪುರ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗೃಹಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…