Featured

ಉಡುಪಿ : ಅನಧಿಕೃತ ಮರಳು ಗಣಿಗಾರಿಕೆ ಕಂಡುಬoದಲ್ಲಿ ಕಟ್ಟುನಿಟ್ಟಿನ ಕ್ರಮ -Vishwanews24

ಉಡುಪಿ : ಅನಧಿಕೃತ ಮರಳು ಗಣಿಗಾರಿಕೆ ಕಂಡುಬoದಲ್ಲಿ ಕಟ್ಟುನಿಟ್ಟಿನ ಕ್ರಮ -Vishwanews24

ಉಡುಪಿ, : ಜಿಲ್ಲೆಯ ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲೂಕುಗಳ ವ್ಯಾಪ್ತಿಯಲ್ಲಿನ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಪ್ರದೇಶಗಳ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸಲು ಅನುಮತಿ, ತಾತ್ಕಾಲಿಕ ಪರವಾನಿಗೆ ಹಾಗೂ ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್‌ಝಡ್) ಪ್ರದೇಶದ ನದಿ ಪಾತ್ರಗಳಲ್ಲಿ ಮರಳುಗಾರಿಕೆ ನಡೆಸಲು ಮರಳು ಗಣಿ ಗುತ್ತಿಗೆಗಳನ್ನು ನೀಡಲಾಗಿದ್ದು, ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಜಿಲ್ಲೆಯ ಕಟ್ಟಡ ನಿರ್ಮಾಣ ಮಾಲೀಕರು ಹಾಗೂ ಗುತ್ತಿಗೆದಾರರು ಮಂಜೂರಾದ ಕಟ್ಟಡದ ಕಾಮಗಾರಿಗಳ ಅವಶ್ಯಕತೆಗನುಗುಣವಾಗಿ ಗಣಿ ಗುತ್ತಿಗೆ ಮತ್ತು ತಾತ್ಕಾಲಿಕ ಪರವಾನಿಗೆ ಪಡೆದ ಪರವಾನಿಗೆದಾರರಿಂದ ಉಪಖನಿಜಕ್ಕೆ (ಸಾಮಾನ್ಯ ಮರಳು) ರವಾನೆ, ಸಾಗಾಟ ಪರವಾನಿಗೆ ಪಡೆದು ಬಳಸಬೇಕು.

ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್‌ಝಡ್) ಹಾಗೂ ಕರಾವಳಿ ನಿಯಂತ್ರಣ ವಲಯದ (ಸಿಆರ್‌ಝಡ್) ನದಿ ಪಾತ್ರಗಳಲ್ಲಿ ಅನಧಿಕೃತ ಮರಳು ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಮಾಡುವುದು ಹಾಗೂ ಮಾಡಿರುವುದು ಕಂಡುಬoದಲ್ಲಿ ಸಂಬAಧಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುವ ನಾಡ ದೋಣಿಗಳು ನದಿಯಲ್ಲಿ ಕಂಡುಬoದಲ್ಲಿ ಸದರಿ ನಾಡದೋಣಿಗಳನ್ನು, ಇತರೆ ಸ್ವತ್ತುಗಳನ್ನು ಹಾಗೂ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುವ ವಾಹನಗಳನ್ನು ಸಹ ವಶಕ್ಕೆ ಪಡೆದು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಕ್ರಮವಹಿಸಲಾಗುವುದೆಂದು ಎಂದು ಹಿರಿಯ ಭೂವಿಜ್ಞಾನಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago