Featured

ಉಡುಪಿ : ಅನಧಿಕೃತ ಮರಳು ಗಣಿಗಾರಿಕೆ ಕಂಡುಬoದಲ್ಲಿ ಕಟ್ಟುನಿಟ್ಟಿನ ಕ್ರಮ -Vishwanews24

ಉಡುಪಿ : ಅನಧಿಕೃತ ಮರಳು ಗಣಿಗಾರಿಕೆ ಕಂಡುಬoದಲ್ಲಿ ಕಟ್ಟುನಿಟ್ಟಿನ ಕ್ರಮ -Vishwanews24

ಉಡುಪಿ, : ಜಿಲ್ಲೆಯ ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲೂಕುಗಳ ವ್ಯಾಪ್ತಿಯಲ್ಲಿನ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಪ್ರದೇಶಗಳ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸಲು ಅನುಮತಿ, ತಾತ್ಕಾಲಿಕ ಪರವಾನಿಗೆ ಹಾಗೂ ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್‌ಝಡ್) ಪ್ರದೇಶದ ನದಿ ಪಾತ್ರಗಳಲ್ಲಿ ಮರಳುಗಾರಿಕೆ ನಡೆಸಲು ಮರಳು ಗಣಿ ಗುತ್ತಿಗೆಗಳನ್ನು ನೀಡಲಾಗಿದ್ದು, ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಜಿಲ್ಲೆಯ ಕಟ್ಟಡ ನಿರ್ಮಾಣ ಮಾಲೀಕರು ಹಾಗೂ ಗುತ್ತಿಗೆದಾರರು ಮಂಜೂರಾದ ಕಟ್ಟಡದ ಕಾಮಗಾರಿಗಳ ಅವಶ್ಯಕತೆಗನುಗುಣವಾಗಿ ಗಣಿ ಗುತ್ತಿಗೆ ಮತ್ತು ತಾತ್ಕಾಲಿಕ ಪರವಾನಿಗೆ ಪಡೆದ ಪರವಾನಿಗೆದಾರರಿಂದ ಉಪಖನಿಜಕ್ಕೆ (ಸಾಮಾನ್ಯ ಮರಳು) ರವಾನೆ, ಸಾಗಾಟ ಪರವಾನಿಗೆ ಪಡೆದು ಬಳಸಬೇಕು.

ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್‌ಝಡ್) ಹಾಗೂ ಕರಾವಳಿ ನಿಯಂತ್ರಣ ವಲಯದ (ಸಿಆರ್‌ಝಡ್) ನದಿ ಪಾತ್ರಗಳಲ್ಲಿ ಅನಧಿಕೃತ ಮರಳು ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಮಾಡುವುದು ಹಾಗೂ ಮಾಡಿರುವುದು ಕಂಡುಬoದಲ್ಲಿ ಸಂಬAಧಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುವ ನಾಡ ದೋಣಿಗಳು ನದಿಯಲ್ಲಿ ಕಂಡುಬoದಲ್ಲಿ ಸದರಿ ನಾಡದೋಣಿಗಳನ್ನು, ಇತರೆ ಸ್ವತ್ತುಗಳನ್ನು ಹಾಗೂ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುವ ವಾಹನಗಳನ್ನು ಸಹ ವಶಕ್ಕೆ ಪಡೆದು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಕ್ರಮವಹಿಸಲಾಗುವುದೆಂದು ಎಂದು ಹಿರಿಯ ಭೂವಿಜ್ಞಾನಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

12 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

12 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

12 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

14 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

14 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

15 hours ago