ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ ಸಿಆರ್ಝಡ್ ಪ್ರದೇಶ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು, ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸಲು ಹಾಗೂ ಬಜೆ ಡ್ಯಾಮ್ನಲ್ಲಿ ಹೂಳೆತ್ತಿ, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಬೇರ್ಪಡಿಸಿ ವಿಲೇವಾರಿ ಮಾಡುವ ಬಗ್ಗೆ ಕ್ರಮವಹಿಸಲಾಗುತ್ತಿದ್ದು, ಪಿ.ಡಬ್ಲ್ಯೂ.ಡಿ ಗುತ್ತಿಗೆದಾರರು, ಸಾರ್ವಜನಿಕರು ಕಾಮಗಾರಿಗಳಿಗನುಸಾರ ಅಗತ್ಯತೆಗಳಿಗನುಗುಣವಾಗಿ ಮರಳನ್ನು ಪಡೆಯಬಹುದಾಗಿದೆ. ಇದನ್ನು ಹೊರತುಪಡಿಸಿ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಆದೇಶಿಸಲಾಗಿರುತ್ತದೆ.
ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ವಿರುದ್ಧ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಪ್ರಾರಂಭವಾದ ನಂತರ ನ್ಯಾಯಾಲಯದಲ್ಲಿ ಒಒಆಖ ಂಛಿಣ ರಡಿಯಲ್ಲಿ ಹಾಗೂ ಕರ್ನಾಟಕ ಉಪಖನಿಜ ರಿಯಾಯತಿ ನಿಯಮಾವಳಿ 1994 ರನ್ವಯ 23 ಖಾಸಗಿ ದೂರು ದಾಖಲಿಸಲಾಗಿರುತ್ತದೆ.
ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಬಗ್ಗೆ ಮಾಹಿತಿ ಬರುತ್ತಿರುವುದರಿಂದ ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅದಾಗ್ಯೂ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ ಅಥವಾ ದಾಸ್ತಾನು ಮಾಡುವುದು ಪುನರಾವರ್ತಿತವಾದಲ್ಲಿ ನಿಯಮಾನುಸಾರ ಗೂಂಡಾ ಕಾಯ್ದೆರಡಿಯಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…