Featured

ಉಡುಪಿ : ಅನಧಿಕೃತ ಮರಳು ಸಾಗಾಣಿಕೆ ಕಂಡುಬಂದಲ್ಲಿ ಕಠಿಣ ಕ್ರಮ : ಜಿಲ್ಲಾಧಿಕಾರಿ ಆದೇಶ -Vishwanews24

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ ಸಿಆರ್ಝಡ್ ಪ್ರದೇಶ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು, ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸಲು ಹಾಗೂ ಬಜೆ ಡ್ಯಾಮ್ನಲ್ಲಿ ಹೂಳೆತ್ತಿ, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಬೇರ್ಪಡಿಸಿ ವಿಲೇವಾರಿ ಮಾಡುವ ಬಗ್ಗೆ ಕ್ರಮವಹಿಸಲಾಗುತ್ತಿದ್ದು, ಪಿ.ಡಬ್ಲ್ಯೂ.ಡಿ ಗುತ್ತಿಗೆದಾರರು, ಸಾರ್ವಜನಿಕರು ಕಾಮಗಾರಿಗಳಿಗನುಸಾರ ಅಗತ್ಯತೆಗಳಿಗನುಗುಣವಾಗಿ ಮರಳನ್ನು ಪಡೆಯಬಹುದಾಗಿದೆ. ಇದನ್ನು ಹೊರತುಪಡಿಸಿ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಆದೇಶಿಸಲಾಗಿರುತ್ತದೆ.

ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ವಿರುದ್ಧ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಪ್ರಾರಂಭವಾದ ನಂತರ ನ್ಯಾಯಾಲಯದಲ್ಲಿ ಒಒಆಖ ಂಛಿಣ ರಡಿಯಲ್ಲಿ ಹಾಗೂ ಕರ್ನಾಟಕ ಉಪಖನಿಜ ರಿಯಾಯತಿ ನಿಯಮಾವಳಿ 1994 ರನ್ವಯ 23 ಖಾಸಗಿ ದೂರು ದಾಖಲಿಸಲಾಗಿರುತ್ತದೆ.

ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಬಗ್ಗೆ ಮಾಹಿತಿ ಬರುತ್ತಿರುವುದರಿಂದ ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅದಾಗ್ಯೂ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ ಅಥವಾ ದಾಸ್ತಾನು ಮಾಡುವುದು ಪುನರಾವರ್ತಿತವಾದಲ್ಲಿ ನಿಯಮಾನುಸಾರ ಗೂಂಡಾ ಕಾಯ್ದೆರಡಿಯಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago