ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ ಸಿಆರ್ಝಡ್ ಪ್ರದೇಶ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು, ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸಲು ಹಾಗೂ ಬಜೆ ಡ್ಯಾಮ್ನಲ್ಲಿ ಹೂಳೆತ್ತಿ, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಬೇರ್ಪಡಿಸಿ ವಿಲೇವಾರಿ ಮಾಡುವ ಬಗ್ಗೆ ಕ್ರಮವಹಿಸಲಾಗುತ್ತಿದ್ದು, ಪಿ.ಡಬ್ಲ್ಯೂ.ಡಿ ಗುತ್ತಿಗೆದಾರರು, ಸಾರ್ವಜನಿಕರು ಕಾಮಗಾರಿಗಳಿಗನುಸಾರ ಅಗತ್ಯತೆಗಳಿಗನುಗುಣವಾಗಿ ಮರಳನ್ನು ಪಡೆಯಬಹುದಾಗಿದೆ. ಇದನ್ನು ಹೊರತುಪಡಿಸಿ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಆದೇಶಿಸಲಾಗಿರುತ್ತದೆ.
ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ವಿರುದ್ಧ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಪ್ರಾರಂಭವಾದ ನಂತರ ನ್ಯಾಯಾಲಯದಲ್ಲಿ ಒಒಆಖ ಂಛಿಣ ರಡಿಯಲ್ಲಿ ಹಾಗೂ ಕರ್ನಾಟಕ ಉಪಖನಿಜ ರಿಯಾಯತಿ ನಿಯಮಾವಳಿ 1994 ರನ್ವಯ 23 ಖಾಸಗಿ ದೂರು ದಾಖಲಿಸಲಾಗಿರುತ್ತದೆ.
ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಬಗ್ಗೆ ಮಾಹಿತಿ ಬರುತ್ತಿರುವುದರಿಂದ ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅದಾಗ್ಯೂ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ ಅಥವಾ ದಾಸ್ತಾನು ಮಾಡುವುದು ಪುನರಾವರ್ತಿತವಾದಲ್ಲಿ ನಿಯಮಾನುಸಾರ ಗೂಂಡಾ ಕಾಯ್ದೆರಡಿಯಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…