ಉಡುಪಿ : ಜಿಲ್ಲೆಯಲ್ಲಿ ಇರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆ.ಎಸ್.ಡಿ.ಸಿ ಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಲಾಗಿದ್ದು, ಈ ಸಂಬAಧ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಪಡಿತರ ಚೀಟಿದಾರರಿಂದ ಹಲವು ದೂರುಗಳು ಕೇಳಿ ಬಂದಿರುತ್ತದೆ. ಪ್ರಸ್ತುತ ಹೊಸ ಸರ್ವರ್ ಅಳವಡಿಸಿರುವುದರಿಂದ ಪ್ರಸಕ್ತ ತಿಂಗಳಲ್ಲಿ ತಡವಾಗಿ (ಅಕ್ಟೋಬರ್ 18 ನೇ ತಾರೀಕಿನಿಂದ) ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡಲಾಗುತ್ತಿದೆ.
ಪ್ರಸಕ್ತ ತಿಂಗಳಲ್ಲಿ ಪಡಿತರ ವಿತರಣೆಯು ವಿಳಂಬವಾಗಿ ಪ್ರಾರಂಭವಾಗಿರುವುದರಿ0ದ ಆಹಾರ ಇಲಾಖೆಯ ಆಯುಕ್ತರು ಅಕ್ಟೋಬರ್-2024 ರ ಮಾಹೆಗೆ ಮಾತ್ರ ಪಡಿತರ ವಿತರಣೆಯನ್ನು ಬೆಳಗ್ಗೆ 6 ಗಂಟೆಯಿ0ದ ರಾತ್ರಿ 10 ರ ವರೆಗೆ ನಿಗಧಿಪಡಿಸಲಾಗಿರುತ್ತದೆ.
ತಾಂತ್ರಿಕ ಸಮಸ್ಯೆಯಿಂದ ಪಡಿತರ ವಿತರಣೆಯು ವಿಳಂಬವಾಗಿರುವುದರಿAದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಪಡಿತರ ಪಡೆಯಲು ತೊಂದರೆಯಾಗುತ್ತಿರುವುದು ಆಹಾರ ಇಲಾಖೆಯ ಆಯುಕ್ತರ ಗಮನಕ್ಕೆ ತಂದಿದ್ದು, ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಹಾಗೂ ಸಾರ್ವಜನಿಕರು ಈ ಬಗ್ಗೆ ಯಾವುದೇ ಆತಂಕ ಪಡುವುದು ಬೇಡವೆಂದು ತಿಳಿಸಿರುತ್ತಾರೆ.
ಅನರ್ಹ ಪಡಿತರ ಚೀಟಿದಾರರ ಬಗ್ಗೆ, ಜಿಲ್ಲೆಯ ಎಲ್ಲಾ ತಾಲೂಕಿನ ಆಹಾರ ಶಿರಸ್ತೇದಾರರು ಮತ್ತು ಆಹಾರ ನಿರೀಕ್ಷಕರು ಪರಿಶೀಲನೆ ನಡೆಸುತ್ತಿದ್ದು, ಈ ವೇಳೆ ಸಾರ್ವಜನಿಕರು ತಾವಾಗಿಯೇ ಬಿ.ಪಿ.ಎಲ್ ಪಡಿತರ ಚೀಟಿ ಪಡೆಯಲು ಅನರ್ಹತೆ ಹೊಂದಿದ್ದಲ್ಲಿ ಸ್ವತಃ/ ತಾವಾಗಿಯೇ ಪಡಿತರ ಚೀಟಿಯನ್ನು ಸೆರೆಂಡರ್ ಮಾಡಬೇಕು. ಈ ಬಗ್ಗೆ ಆಹಾರ ಶಾಖೆಗೆ ಪರಿಶೀಲನೆಗೆ ಒಳಪಡಿಸಲು ತಿಳಿಸಿರುವ ಪಡಿತರ ಚೀಟಿದಾರರಿಗೆ ಅಕ್ಟೋಬರ್ ತಿಂಗಳಲ್ಲಿ ಪಡಿತರವನ್ನು ನೀಡಲು ಈಗಾಗಲೇ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…