ಉಡುಪಿ : ಜಿಲ್ಲೆಯಲ್ಲಿ ಇರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆ.ಎಸ್.ಡಿ.ಸಿ ಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಲಾಗಿದ್ದು, ಈ ಸಂಬAಧ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಪಡಿತರ ಚೀಟಿದಾರರಿಂದ ಹಲವು ದೂರುಗಳು ಕೇಳಿ ಬಂದಿರುತ್ತದೆ. ಪ್ರಸ್ತುತ ಹೊಸ ಸರ್ವರ್ ಅಳವಡಿಸಿರುವುದರಿಂದ ಪ್ರಸಕ್ತ ತಿಂಗಳಲ್ಲಿ ತಡವಾಗಿ (ಅಕ್ಟೋಬರ್ 18 ನೇ ತಾರೀಕಿನಿಂದ) ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡಲಾಗುತ್ತಿದೆ.
ಪ್ರಸಕ್ತ ತಿಂಗಳಲ್ಲಿ ಪಡಿತರ ವಿತರಣೆಯು ವಿಳಂಬವಾಗಿ ಪ್ರಾರಂಭವಾಗಿರುವುದರಿ0ದ ಆಹಾರ ಇಲಾಖೆಯ ಆಯುಕ್ತರು ಅಕ್ಟೋಬರ್-2024 ರ ಮಾಹೆಗೆ ಮಾತ್ರ ಪಡಿತರ ವಿತರಣೆಯನ್ನು ಬೆಳಗ್ಗೆ 6 ಗಂಟೆಯಿ0ದ ರಾತ್ರಿ 10 ರ ವರೆಗೆ ನಿಗಧಿಪಡಿಸಲಾಗಿರುತ್ತದೆ.
ತಾಂತ್ರಿಕ ಸಮಸ್ಯೆಯಿಂದ ಪಡಿತರ ವಿತರಣೆಯು ವಿಳಂಬವಾಗಿರುವುದರಿAದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಪಡಿತರ ಪಡೆಯಲು ತೊಂದರೆಯಾಗುತ್ತಿರುವುದು ಆಹಾರ ಇಲಾಖೆಯ ಆಯುಕ್ತರ ಗಮನಕ್ಕೆ ತಂದಿದ್ದು, ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಹಾಗೂ ಸಾರ್ವಜನಿಕರು ಈ ಬಗ್ಗೆ ಯಾವುದೇ ಆತಂಕ ಪಡುವುದು ಬೇಡವೆಂದು ತಿಳಿಸಿರುತ್ತಾರೆ.
ಅನರ್ಹ ಪಡಿತರ ಚೀಟಿದಾರರ ಬಗ್ಗೆ, ಜಿಲ್ಲೆಯ ಎಲ್ಲಾ ತಾಲೂಕಿನ ಆಹಾರ ಶಿರಸ್ತೇದಾರರು ಮತ್ತು ಆಹಾರ ನಿರೀಕ್ಷಕರು ಪರಿಶೀಲನೆ ನಡೆಸುತ್ತಿದ್ದು, ಈ ವೇಳೆ ಸಾರ್ವಜನಿಕರು ತಾವಾಗಿಯೇ ಬಿ.ಪಿ.ಎಲ್ ಪಡಿತರ ಚೀಟಿ ಪಡೆಯಲು ಅನರ್ಹತೆ ಹೊಂದಿದ್ದಲ್ಲಿ ಸ್ವತಃ/ ತಾವಾಗಿಯೇ ಪಡಿತರ ಚೀಟಿಯನ್ನು ಸೆರೆಂಡರ್ ಮಾಡಬೇಕು. ಈ ಬಗ್ಗೆ ಆಹಾರ ಶಾಖೆಗೆ ಪರಿಶೀಲನೆಗೆ ಒಳಪಡಿಸಲು ತಿಳಿಸಿರುವ ಪಡಿತರ ಚೀಟಿದಾರರಿಗೆ ಅಕ್ಟೋಬರ್ ತಿಂಗಳಲ್ಲಿ ಪಡಿತರವನ್ನು ನೀಡಲು ಈಗಾಗಲೇ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…