ಉಡುಪಿ: ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮAಡಳಿಗಳು/ ನಿಗಮಗಳು/ ಸ್ವಾಯತ್ತತೆ ಸಂಸ್ಥೆಗಳು ಇತ್ಯಾದಿ ಒಳಗೊಂಡAತೆ ಆದಾಯ ತೆರಿಗೆ/ ಸೇವಾತೆರಿಗೆ/ ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ವಾರ್ಷಿಕ ಆದಾಯ ಇರುವ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಪಡೆಯಲು (ಬಿ.ಪಿ.ಎಲ್) ಅರ್ಹರಿರುವುದಿಲ್ಲ.
ಸರ್ಕಾರ ನಿಗಧಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿ ಹೊಂದಿರುವ ಸಾರ್ವಜನಿಕರು ತಕ್ಷಣವೇ ತಾಲೂಕಿನ ತಹಶೀಲ್ದಾರರ ಕಛೇರಿಗೆ ಪಡಿತರ ಚೀಟಿಯನ್ನು ಒಪ್ಪಿಸಿ ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿ ಪಡೆಯಬೇಕು. ಜಿಲ್ಲಾ ಮಟ್ಟದಲ್ಲಿ ಅನರ್ಹ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ತಪಾಸಣಾ ತಂಡವನ್ನು ರಚಿಸಲಾಗುತ್ತಿದ್ದು, ತಪಾಸಣಾ ಸಮಯದಲ್ಲಿ ಅನರ್ಹರು ಎಂದು ಕಂಡು ಬಂದಲ್ಲಿ ಅವರು ಪಡೆದಿರುವ ಆಹಾರಧಾನ್ಯಕ್ಕೆ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ ವಸೂಲಾತಿ ಮಾಡುವುದರೊಂದಿಗೆ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಕರ್ನಾಟಕ ಅನಧಿಕೃತ ಪಡಿತರ ಚೀಟಿ (Prevention of Unauthorised Possesion of Rations Cards) ಆದೇಶ 1977ರಡಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…