ಉಡುಪಿ: ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

Featured, ಉಡುಪಿ

ಉಡುಪಿ: ಪಡಿತರ ಚೀಟಿಗೆ ಇ-ಕೆವೈಸಿ ಕಡ್ಡಾಯ ..

ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ: ಅನ್ನಭಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ನ್ನು ಆರ್ಥಿಕವಾಗಿ ಸಧೃಡವಾದ ಕೆಲವು ಕುಟುಂಬಗಳು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆಯುವ ಬಗ್ಗೆ ಮಾನದಂಡವನ್ನು ಉಲ್ಲಂಘಿಸಿ, ಸುಳ್ಳು ಮಾಹಿತಿ ನೀಡಿ, ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆದುಕೊಂಡಿರುವುದು ಕಂಡುಬ0ದಿದ್ದು, ಅಂತಹ ಅನರ್ಹರು ಪಡೆದಿರುವ ಕಾರ್ಡ್ನ್ನು ಪತ್ತೆಹಚ್ಚಿ ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕವಾಗಿ ಸಧೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡ್ನ್ನು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ.

ಇದನ್ನೂ ಓದಿ : ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಕಾರು- ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ, ರಿಕ್ಷಾ ಚಾಲಕ ದಾರುಣ ಸಾವು -Vishwanews24

ತಪ್ಪಿದಲ್ಲಿ ಸರ್ಕಾರ ನಿಗಧಿಪಡಿಸಿರುವ ಮಾನದಂಡ ವಿರುದ್ಧವಾಗಿ ಪಡೆದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವುದು ಕಾನೂನು ಬಾಹಿರವಾಗಿದ್ದು, ಅಂತವರ ವಿರುದ್ಧ ಕ್ರಮ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿಗೆ ಇ-ಕೆವೈಸಿ ಕಡ್ಡಾಯ 

ಉಡುಪಿ : ಜಿಲ್ಲೆಯ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವವರು ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾ0ಶದಲ್ಲಿ ಬಯೋ ದೃಡೀಕರಣ ನೀಡಿ, ಇ-ಕೆವೈಸಿ ಮಾಡಲು ಪ್ರತಿ ತಿಂಗಳ 1 ರಿಂದ 10 ನೇ ತಾರೀಖಿನ ವರೆಗೆ ತಂತ್ರಾ0ಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಈವರೆಗೆ ಇ-ಕೆವೈಸಿ ಆಗದೇ ಇರುವ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಡೀಕರಣ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಜಿಲ್ಲೆಯಲ್ಲಿ ಏ.16 ರಿಂದ 30 ರವರೆಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24