Featured

ಉಡುಪಿ: ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ: ಪಡಿತರ ಚೀಟಿಗೆ ಇ-ಕೆವೈಸಿ ಕಡ್ಡಾಯ ..

ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ: ಅನ್ನಭಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ನ್ನು ಆರ್ಥಿಕವಾಗಿ ಸಧೃಡವಾದ ಕೆಲವು ಕುಟುಂಬಗಳು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆಯುವ ಬಗ್ಗೆ ಮಾನದಂಡವನ್ನು ಉಲ್ಲಂಘಿಸಿ, ಸುಳ್ಳು ಮಾಹಿತಿ ನೀಡಿ, ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆದುಕೊಂಡಿರುವುದು ಕಂಡುಬ0ದಿದ್ದು, ಅಂತಹ ಅನರ್ಹರು ಪಡೆದಿರುವ ಕಾರ್ಡ್ನ್ನು ಪತ್ತೆಹಚ್ಚಿ ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕವಾಗಿ ಸಧೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡ್ನ್ನು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ.

ಇದನ್ನೂ ಓದಿ : ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಕಾರು- ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ, ರಿಕ್ಷಾ ಚಾಲಕ ದಾರುಣ ಸಾವು -Vishwanews24

ತಪ್ಪಿದಲ್ಲಿ ಸರ್ಕಾರ ನಿಗಧಿಪಡಿಸಿರುವ ಮಾನದಂಡ ವಿರುದ್ಧವಾಗಿ ಪಡೆದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವುದು ಕಾನೂನು ಬಾಹಿರವಾಗಿದ್ದು, ಅಂತವರ ವಿರುದ್ಧ ಕ್ರಮ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿಗೆ ಇ-ಕೆವೈಸಿ ಕಡ್ಡಾಯ 

ಉಡುಪಿ : ಜಿಲ್ಲೆಯ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವವರು ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾ0ಶದಲ್ಲಿ ಬಯೋ ದೃಡೀಕರಣ ನೀಡಿ, ಇ-ಕೆವೈಸಿ ಮಾಡಲು ಪ್ರತಿ ತಿಂಗಳ 1 ರಿಂದ 10 ನೇ ತಾರೀಖಿನ ವರೆಗೆ ತಂತ್ರಾ0ಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಈವರೆಗೆ ಇ-ಕೆವೈಸಿ ಆಗದೇ ಇರುವ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಡೀಕರಣ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಜಿಲ್ಲೆಯಲ್ಲಿ ಏ.16 ರಿಂದ 30 ರವರೆಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

5 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

6 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

6 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago