ಉಡುಪಿ: ಅನ್ನಭಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ನ್ನು ಆರ್ಥಿಕವಾಗಿ ಸಧೃಡವಾದ ಕೆಲವು ಕುಟುಂಬಗಳು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆಯುವ ಬಗ್ಗೆ ಮಾನದಂಡವನ್ನು ಉಲ್ಲಂಘಿಸಿ, ಸುಳ್ಳು ಮಾಹಿತಿ ನೀಡಿ, ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆದುಕೊಂಡಿರುವುದು ಕಂಡುಬ0ದಿದ್ದು, ಅಂತಹ ಅನರ್ಹರು ಪಡೆದಿರುವ ಕಾರ್ಡ್ನ್ನು ಪತ್ತೆಹಚ್ಚಿ ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕವಾಗಿ ಸಧೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡ್ನ್ನು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ.
ಇದನ್ನೂ ಓದಿ : ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಕಾರು- ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ, ರಿಕ್ಷಾ ಚಾಲಕ ದಾರುಣ ಸಾವು -Vishwanews24
ತಪ್ಪಿದಲ್ಲಿ ಸರ್ಕಾರ ನಿಗಧಿಪಡಿಸಿರುವ ಮಾನದಂಡ ವಿರುದ್ಧವಾಗಿ ಪಡೆದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವುದು ಕಾನೂನು ಬಾಹಿರವಾಗಿದ್ದು, ಅಂತವರ ವಿರುದ್ಧ ಕ್ರಮ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡಿತರ ಚೀಟಿಗೆ ಇ-ಕೆವೈಸಿ ಕಡ್ಡಾಯ
ಉಡುಪಿ : ಜಿಲ್ಲೆಯ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವವರು ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾ0ಶದಲ್ಲಿ ಬಯೋ ದೃಡೀಕರಣ ನೀಡಿ, ಇ-ಕೆವೈಸಿ ಮಾಡಲು ಪ್ರತಿ ತಿಂಗಳ 1 ರಿಂದ 10 ನೇ ತಾರೀಖಿನ ವರೆಗೆ ತಂತ್ರಾ0ಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.
ಈವರೆಗೆ ಇ-ಕೆವೈಸಿ ಆಗದೇ ಇರುವ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಡೀಕರಣ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :ಜಿಲ್ಲೆಯಲ್ಲಿ ಏ.16 ರಿಂದ 30 ರವರೆಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…