ಉಡುಪಿ: ಸಾಂಪ್ರದಾಯಿಕ ವಾತಾವರಣದಲ್ಲಿ ಸಂಪ್ರದಾಯ ಬದ್ಧವಾಗಿ ಅಧಿಕಾರಿಗಳೇ ಸಂಬಂಧಿಕರ ಸ್ಥಾನದಲ್ಲಿ ನಿಂತು ಅನಾಥ ಯುವತಿಯನ್ನು ಧಾರೆಯೆರೆದು ಕೊಟ್ಟು ಆಕೆಯ ಬಾಳಿಗೆ ಬೆಳಕು ನೀಡಿದ್ದು ವಿಶೇಷವಾಗಿತ್ತು.
ಮನೆಯವರಿಂದ ದೂರವಾಗಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ನಿಟ್ಟೂರು ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿರುವ 25ರ ಹರೆಯದ ಯುವತಿ ಜಯಶ್ರಿಯನ್ನು ಹೊರ ಜಿಲ್ಲೆಯ ಕೃಷಿ ಕುಟುಂಬದ ಹಿನ್ನೆಲೆಯ 29ರ ಹರೆಯದ ಯುವಕ ಮಲ್ಲೇಶ ಡಿ.ಎಲ್. ಅವರ ವಿವಾಹ ಅ. ೨೮ ರ ಶುಕ್ರವಾರ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ವತಿಯಿಂದ ಉಡುಪಿ ನಿಟ್ಟೂರು ಸರ್ಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಿತು.
ಮಲ್ಪೆ : ಚಲಿಸುತ್ತಿರುವ ಬೋಟ್ ಗಳಲ್ಲಿ ಸಾವಿರಾರು ಗಾಯಕರಿಂದ ಕೋಟಿ ಕಂಠ ಗಾಯನ – Vishwanews24
ಅನಾಥ ಯುವತಿಯನ್ನು ವಿವಾಹವಾಗುವುದಾಗಿ ಯುವಕನೇ ಮದುವೆಯ ಪ್ರಸ್ತಾವ ಇಟ್ಟ ಹಿನ್ನಲೆ, ಆತನ ಜಿಲ್ಲೆಯ ಅಧಿಕಾರಿಗಳ ಮೂಲಕ ಯುವಕನ ಗುಣ-ನಡತೆ, ಕುಟುಂಬಿಕರ ಬಗ್ಗೆ ಮಾಹಿತಿ ಕಲೆಹಾಕಲಾಯಿತು. ಈ ವರದಿಗಳನ್ನು ರಾಜ್ಯ ಮಹಿಳಾ ನಿಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿ ಅನುಮೋದನೆ ನೀಡಿತ್ತು, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ವಿವಾಹಕ್ಕೆ ಒಪ್ಪಿಗೆ ನೀಡಿದ್ದರು.
ಜಮೀನು ನಕ್ಷೆಗಳು ಇನ್ಮುಂದೆ ಆನ್ ಲೈನ್ ನಲ್ಲೇ ಲಭ್ಯ..ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24
ಕರ್ನಾಟಕದ ಸರಕಾರದ ಲಾಂಛನ, ಆದಿ ಪೂಜಿತ ಗಣಪತಿ ದೇವರ ಚಿತ್ರದೊಂದಿಗೆ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ಆಯೋಜಕರು. ವಧು-ವರನ ಹೆಸರು ಮುದ್ರಿಸಿ, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ , ಸೇರಿದಂತೆ ಅಧಿಕಾರಿ, ಸಿಬಂದಿ ವರ್ಗಕ್ಕೆ ಆಮಂತ್ರಣ ಪತ್ರಿಕೆ ಹಂಚಲಾಯಿತು. ಇಂದು ಹಲವು ದಾನಿಗಳ ಸಹಕಾರದೊಂದಿಗೆ ಅನಾಥ ಯುವತಿಯ ವಿವಾಹ ಅದ್ದೂರಿಯಾಗಿ ನೆರವೇರಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…