Featured

ಉಡುಪಿ: ಅನಾಥ ಯುವತಿಯ ಅದ್ದೂರಿ ವಿವಾಹ  :  ಧಾರೆ ಎರೆದು ಆಕೆಯ ಬಾಳಿಗೆ ಬೆಳಕು ನೀಡಿದ ಸರ್ಕಾರಿ ಅಧಿಕಾರಿಗಳು – Vishwanews24

ಉಡುಪಿ: ಅನಾಥ ಯುವತಿಯ ಅದ್ದೂರಿ ವಿವಾಹ  :  ಧಾರೆ ಎರೆದು ಆಕೆಯ ಬಾಳಿಗೆ ಬೆಳಕು ನೀಡಿದ ಸರ್ಕಾರಿ ಅಧಿಕಾರಿಗಳು

ಉಡುಪಿ: ಸಾಂಪ್ರದಾಯಿಕ ವಾತಾವರಣದಲ್ಲಿ ಸಂಪ್ರದಾಯ ಬದ್ಧವಾಗಿ ಅಧಿಕಾರಿಗಳೇ ಸಂಬಂಧಿಕರ ಸ್ಥಾನದಲ್ಲಿ ನಿಂತು ಅನಾಥ ಯುವತಿಯನ್ನು ಧಾರೆಯೆರೆದು ಕೊಟ್ಟು ಆಕೆಯ ಬಾಳಿಗೆ ಬೆಳಕು ನೀಡಿದ್ದು ವಿಶೇಷವಾಗಿತ್ತು.

ಮನೆಯವರಿಂದ ದೂರವಾಗಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ನಿಟ್ಟೂರು ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿರುವ 25ರ ಹರೆಯದ ಯುವತಿ ಜಯಶ್ರಿಯನ್ನು ಹೊರ ಜಿಲ್ಲೆಯ ಕೃಷಿ ಕುಟುಂಬದ ಹಿನ್ನೆಲೆಯ 29ರ ಹರೆಯದ ಯುವಕ ಮಲ್ಲೇಶ ಡಿ.ಎಲ್. ಅವರ ವಿವಾಹ ಅ. ೨೮ ರ ಶುಕ್ರವಾರ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ವತಿಯಿಂದ ಉಡುಪಿ ನಿಟ್ಟೂರು ಸರ್ಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಿತು.

ಮಲ್ಪೆ : ಚಲಿಸುತ್ತಿರುವ ಬೋಟ್ ಗಳಲ್ಲಿ ಸಾವಿರಾರು ಗಾಯಕರಿಂದ ಕೋಟಿ ಕಂಠ ಗಾಯನ – Vishwanews24

ಅನಾಥ ಯುವತಿಯನ್ನು ವಿವಾಹವಾಗುವುದಾಗಿ ಯುವಕನೇ ಮದುವೆಯ ಪ್ರಸ್ತಾವ ಇಟ್ಟ ಹಿನ್ನಲೆ, ಆತನ ಜಿಲ್ಲೆಯ ಅಧಿಕಾರಿಗಳ ಮೂಲಕ ಯುವಕನ ಗುಣ-ನಡತೆ, ಕುಟುಂಬಿಕರ ಬಗ್ಗೆ ಮಾಹಿತಿ ಕಲೆಹಾಕಲಾಯಿತು. ಈ ವರದಿಗಳನ್ನು ರಾಜ್ಯ ಮಹಿಳಾ ನಿಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿ ಅನುಮೋದನೆ ನೀಡಿತ್ತು, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ವಿವಾಹಕ್ಕೆ ಒಪ್ಪಿಗೆ ನೀಡಿದ್ದರು.

ಜಮೀನು ನಕ್ಷೆಗಳು ಇನ್ಮುಂದೆ ಆನ್ ಲೈನ್ ನಲ್ಲೇ ಲಭ್ಯ..ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24

ಕರ್ನಾಟಕದ ಸರಕಾರದ ಲಾಂಛನ, ಆದಿ ಪೂಜಿತ ಗಣಪತಿ ದೇವರ ಚಿತ್ರದೊಂದಿಗೆ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ಆಯೋಜಕರು. ವಧು-ವರನ ಹೆಸರು ಮುದ್ರಿಸಿ, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ , ಸೇರಿದಂತೆ ಅಧಿಕಾರಿ, ಸಿಬಂದಿ ವರ್ಗಕ್ಕೆ ಆಮಂತ್ರಣ ಪತ್ರಿಕೆ ಹಂಚಲಾಯಿತು. ಇಂದು ಹಲವು ದಾನಿಗಳ ಸಹಕಾರದೊಂದಿಗೆ ಅನಾಥ ಯುವತಿಯ ವಿವಾಹ ಅದ್ದೂರಿಯಾಗಿ ನೆರವೇರಿದೆ.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

28 minutes ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

1 hour ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

1 hour ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago