ಉಡುಪಿ: ಸಾಂಪ್ರದಾಯಿಕ ವಾತಾವರಣದಲ್ಲಿ ಸಂಪ್ರದಾಯ ಬದ್ಧವಾಗಿ ಅಧಿಕಾರಿಗಳೇ ಸಂಬಂಧಿಕರ ಸ್ಥಾನದಲ್ಲಿ ನಿಂತು ಅನಾಥ ಯುವತಿಯನ್ನು ಧಾರೆಯೆರೆದು ಕೊಟ್ಟು ಆಕೆಯ ಬಾಳಿಗೆ ಬೆಳಕು ನೀಡಿದ್ದು ವಿಶೇಷವಾಗಿತ್ತು.
ಮನೆಯವರಿಂದ ದೂರವಾಗಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ನಿಟ್ಟೂರು ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿರುವ 25ರ ಹರೆಯದ ಯುವತಿ ಜಯಶ್ರಿಯನ್ನು ಹೊರ ಜಿಲ್ಲೆಯ ಕೃಷಿ ಕುಟುಂಬದ ಹಿನ್ನೆಲೆಯ 29ರ ಹರೆಯದ ಯುವಕ ಮಲ್ಲೇಶ ಡಿ.ಎಲ್. ಅವರ ವಿವಾಹ ಅ. ೨೮ ರ ಶುಕ್ರವಾರ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ವತಿಯಿಂದ ಉಡುಪಿ ನಿಟ್ಟೂರು ಸರ್ಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಿತು.
ಮಲ್ಪೆ : ಚಲಿಸುತ್ತಿರುವ ಬೋಟ್ ಗಳಲ್ಲಿ ಸಾವಿರಾರು ಗಾಯಕರಿಂದ ಕೋಟಿ ಕಂಠ ಗಾಯನ – Vishwanews24
ಅನಾಥ ಯುವತಿಯನ್ನು ವಿವಾಹವಾಗುವುದಾಗಿ ಯುವಕನೇ ಮದುವೆಯ ಪ್ರಸ್ತಾವ ಇಟ್ಟ ಹಿನ್ನಲೆ, ಆತನ ಜಿಲ್ಲೆಯ ಅಧಿಕಾರಿಗಳ ಮೂಲಕ ಯುವಕನ ಗುಣ-ನಡತೆ, ಕುಟುಂಬಿಕರ ಬಗ್ಗೆ ಮಾಹಿತಿ ಕಲೆಹಾಕಲಾಯಿತು. ಈ ವರದಿಗಳನ್ನು ರಾಜ್ಯ ಮಹಿಳಾ ನಿಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿ ಅನುಮೋದನೆ ನೀಡಿತ್ತು, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ವಿವಾಹಕ್ಕೆ ಒಪ್ಪಿಗೆ ನೀಡಿದ್ದರು.
ಜಮೀನು ನಕ್ಷೆಗಳು ಇನ್ಮುಂದೆ ಆನ್ ಲೈನ್ ನಲ್ಲೇ ಲಭ್ಯ..ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24
ಕರ್ನಾಟಕದ ಸರಕಾರದ ಲಾಂಛನ, ಆದಿ ಪೂಜಿತ ಗಣಪತಿ ದೇವರ ಚಿತ್ರದೊಂದಿಗೆ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ಆಯೋಜಕರು. ವಧು-ವರನ ಹೆಸರು ಮುದ್ರಿಸಿ, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ , ಸೇರಿದಂತೆ ಅಧಿಕಾರಿ, ಸಿಬಂದಿ ವರ್ಗಕ್ಕೆ ಆಮಂತ್ರಣ ಪತ್ರಿಕೆ ಹಂಚಲಾಯಿತು. ಇಂದು ಹಲವು ದಾನಿಗಳ ಸಹಕಾರದೊಂದಿಗೆ ಅನಾಥ ಯುವತಿಯ ವಿವಾಹ ಅದ್ದೂರಿಯಾಗಿ ನೆರವೇರಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…